ಗಣ್ಯರ ಭಾವಚಿತ್ರ 
ರಾಜ್ಯ

ವಿಧಾನಸೌಧದಲ್ಲಿರುವ ಗಣ್ಯರ ಭಾವಚಿತ್ರಗಳಿಗೆ ಮತ್ತೆ ಬರಲಿದೆ ಜೀವಕಳೆ

ವಿಧಾನಸೌಧದಲ್ಲಿ ಹಾಕಲಾಗಿರುವ ಮಹಾತ್ಮಾ ಗಾಂಧಿ, ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ್ ಠಾಗೂರ್ ಅವರ ಚಿತ್ರಗಳು ಕಳೆಗುಂದಿದ್ದು, ಮರು ಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ವಿಧಾನಸೌಧದಲ್ಲಿ ಹಾಕಲಾಗಿರುವ ಮಹಾತ್ಮಾ ಗಾಂಧಿ, ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ್ ಠಾಗೂರ್ ಅವರ ಚಿತ್ರಗಳು ಕಳೆಗುಂದಿದ್ದು, ಮರು ಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 
ಸ್ಪೀಕರ್ ಕಚೇರಿಯಲ್ಲಿರುವ, ಸಚಿವರ ಕ್ಯಾಬಿನ್ ಗಳಲ್ಲಿ ಹಾಕಲಾಗಿರುವ ಗಣ್ಯ ವ್ಯಕ್ತಿಗಳ ಚಿತ್ರಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಕಳೆಗುಂದಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಲಾ ಮತ್ತು ಸಾಂಸ್ಕೃತಿಕ ಪರಂಪರೆಯ ಟ್ರಸ್ಟ್(ಐಎನ್ ಟಿಎಸಿಹೆಚ್) ನ ಸಹಾಯ ಪಡೆದು ಕಳೆಗುಂದಿರುವ ಪುರಾತನ ಚಿತ್ರಗಳಿಗೆ 5 ಲಕ್ಷ ರೂ ವೆಚ್ಚದಲ್ಲಿ ಮತ್ತೆ ಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 
ವಿಧಾನಸಭೆಯ ಮೊದಲ ಮಹಡಿಯಲ್ಲಿ ರವೀಂದ್ರನಾಥ್ ಠಾಗೂರ್ ಅವರ ಫೋಟೋ ಇದ್ದು, ಬಾಂಕ್ವೆಟ್ ಹಾಲ್ ನಲ್ಲಿ ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯ, ಕೃಷ್ಣಮೂರ್ತಿ, ರಂಗಾಚಾರ್ಲು ಹಾಗೂ ಇನ್ನಿತರ ಗಣ್ಯರ ಚಿತ್ರಗಳನ್ನು ಹಾಕಲಾಗಿದೆ. ಗಣ್ಯರ ಚಿತ್ರಗಳೊಂದಿಗೆ ಕೆಆರ್ ಎಸ್ ಗಾರ್ಡನ್, ಶಿವನ ಸಮುದ್ರ ಜಲಪಾತ, ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ಇನ್ನಿತರ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನೂ ಹಾಕಲಾಗಿದ್ದು, ದಶಕಗಳ ಕಳಪೆ ನಿರ್ವಹಣೆಯಿಂದ ಈ ಚಿತ್ರಗಳೆಲ್ಲವೂ ಕಳೆಗುಂದಿದೆ ಎಂದು ವಿಧಾನಸಭೆಯ ಅಧಿಕರಿಯೊಬ್ಬರು ತಿಳಿಸಿದ್ದಾರೆ. 
ಪುರಾತನ ಬೆಲೆಬಾಳುವ ಚಿತ್ರಗಳಲ್ಲಿ ಮತ್ತೆ ಜೀವಕಳೆ ಮೂಡುವಂತೆ ಮಾಡುವುದಕ್ಕೆ ಕ್ರಮ ಕೈಗೊಳ್ಳುವುದರ ಬಗ್ಗೆ ಮೇ.4 ರಂದು ಸಮಿತಿ ಸಭೆ ನಡೆದಿದ್ದು, ಐಎನ್ ಟಿಎಸಿಹೆಚ್ ನ ಸಹಯೋಗದಲ್ಲಿ ಕಾಮಗಾರಿ ನಡೆಸಲು ಒಪ್ಪಿಗೆ ಸೂಚಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT