ಸಚಿವ ಸಂಪುಟ ಸಭೆ 
ರಾಜ್ಯ

ರಿಯಾಲ್ಟಿ ಮಸೂದೆಗೆ ಕಾನೂನು ಇಲಾಖೆ ಗ್ರೀನ್ ಸಿಗ್ನಲ್: ಬದಲಾವಣೆ ಇಲ್ಲದೇ ಜಾರಿಗೆ ಶಿಫಾರಸ್ಸು

ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಮಸೂದೆ 2016 ನ್ನು ಯಾವುದೇ ಬದಲಾವಣೆ ಮಾಡದೇ ಜಾರಿಗೊಳಿಸಲು ರಾಜ್ಯ ಕಾನೂನು ಇಲಾಖೆ ಒಪ್ಪಿಗೆ ನೀಡಿದೆ.

ಬೆಂಗಳೂರು: ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಮಸೂದೆ 2016 ನ್ನು ಯಾವುದೇ ಬದಲಾವಣೆ ಮಾಡದೇ ಜಾರಿಗೊಳಿಸಲು ರಾಜ್ಯ ಕಾನೂನು ಇಲಾಖೆ ಒಪ್ಪಿಗೆ ನೀಡಿದೆ. 
ಮುಂದಿನ ಪ್ರಕ್ರಿಯೆಯ ಭಾಗವಾಗಿ ಮಸೂದೆಯ ಸಮಗ್ರ ಅಧ್ಯಯನಕ್ಕೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿಕೊಡಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ರಿಯಾಲ್ಟಿ ಮಸೂದೆಯ ಬಗ್ಗೆ ಚರ್ಚೆ ನಡೆದಿದ್ದು, ಯುಡಿಡಿ ಅಭಿಪ್ರಾಯ ಪಡೆದು ತಡ ಮಾಡದೇ ಮಸೂದೆಯನ್ನು ಜಾರಿಗೊಳಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿಬಿ ಜಯಚಂದ್ರ ಹೇಳಿದ್ದಾರೆ. 
ಕಾನೂನು ಇಲಾಖೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ನನ್ನ ನೇತೃತ್ವದ ಸಂಪುಟ ಉಪಸಮಿತಿ ಸಹ ಮಸೂದೆ ಜಾರಿಗೆ ಒಪ್ಪಿಗೆ ಸೂಚಿಸಿದೆ. ಈಗ ನಗರಾಭಿವೃದ್ಧಿ ಇಲಾಖೆಯ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಸೂದೆ ಜಾರಿಗೆ ಬಂದಿದ್ದರೂ ಕರ್ನಾಟಕ ಆ ನಿಯಮಗಳ ಬಗ್ಗೆ ಅಧಿಸೂಚನೆ ಹೊರಡಿಸಬೇಕಿದೆ. ಕೆಲವೇ ವಾರಗಾಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಜಯಚಂದ್ರ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT