ಕಾಂಕ್ರೀಟ್ ತ್ಯಾಜ್ಯ 
ರಾಜ್ಯ

ಮಾಯಸಂದ್ರ ಕೆರೆಗೆ ಕಾಂಕ್ರೀಟ್ ತ್ಯಾಜ್ಯ ವರದಿ: ಸ್ಥಳಕ್ಕೆ ಬಿಎಂಆರ್ ಸಿಎಲ್ ಅಧಿಕಾರಿಗಳ ಭೇಟಿ

ಮೆಟ್ರೋ ರೈಲ್ ಕಾರ್ಪ್ ಮಾಯಸಂದ್ರ ಕೆರೆಗೆ ಕಾಂಕ್ರೀಟ್ ತ್ಯಾಜ್ಯ ಸುರಿಯುತ್ತಿದೆ ಎಂಬ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಎಂಆರ್ ಸಿಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಮೆಟ್ರೋ ರೈಲ್ ಕಾರ್ಪ್ ಮಾಯಸಂದ್ರ ಕೆರೆಗೆ ಕಾಂಕ್ರೀಟ್ ತ್ಯಾಜ್ಯ ಸುರಿಯುತ್ತಿದೆ ಎಂಬ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಎಂಆರ್ ಸಿಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೆಟ್ರೋ ಫೇಸ್-II  ರ ಕಾಮಗಾರಿಯ ಕಾಂಕ್ರೀಟ್ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿರುವುದರ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಪ್ರಕಟವಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡಿರುವ ಬಿಎಂಆರ್ ಸಿಎಲ್ ವಕ್ತಾರ ವಸಂತ್ ರಾವ್ ಈ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಧಿಕಾರಿಗಳಿಂದ ವರದಿ ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 
ಕೆರೆಯ ಬಳಿ ಹಾಗೂ ಬಫರ್ ಜೋನ್ ಗಳ ಬಳಿ ಒಣ ಅಥವಾ ಹಸಿ ತ್ಯಾಜ್ಯ ಸುರಿಯುವವರಿಗೆ 5 ಲಕ್ಷ ದಂಡ ವಿಧಿಸುವುದಾಗಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ಕೆಎಲ್ ಸಿಡಿಎ) ಎಚ್ಚರಿಕೆ ನೀಡಿದ್ದರೂ ಸಹ ಮಾಯಸಂದ್ರ ಕೆರೆಯ ಬಳಿ ಕಾಂಕ್ರೀಟ್ ತ್ಯಾಜ್ಯವನ್ನು ಸುರಿಯಲಾಗುತ್ತಿರುವುದರ ಬಗ್ಗೆ ಮೇ.09 ರಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಟಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT