ಪಾಲಿ ನಾರಿಮನ್ 
ರಾಜ್ಯ

ಕಾವೇರಿ ವಿವಾದ: ಮುಂದಿನ ವಾರ ರಾಜ್ಯದ ನಿಯೋಗದಿಂದ ನಾರಿಮನ್ ಭೇಟಿ

ಮುಂದಿನ ವಾರ ರಾಜ್ಯದ ಪರ ವಕೀಲ ಪಾಲಿ ನಾರಿಮನ್ ಅವರನ್ನ ಭೇಟಿ ಮಾಡಿ ಸಲಹೆ ಪಡೆದ ಬಳಿಕ ಮುಂದಿನ ಹೆಜ್ಜೆ ಇಡಲು ನಿರ್ಧರಿಸಲಾಗಿದೆ ಎಂದು ಸಿಎಂ ..

ಬೆಂಗಳೂರು: ಮುಂದಿನ ವಾರ ರಾಜ್ಯದ ಪರ ವಕೀಲ ಪಾಲಿ ನಾರಿಮನ್ ಅವರನ್ನ ಭೇಟಿ ಮಾಡಿ ಸಲಹೆ ಪಡೆದ ಬಳಿಕ ಮುಂದಿನ ಹೆಜ್ಜೆ ಇಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾವೇರಿ ಕೊಳ್ಳದ ನಿರ್ವಹಣೆಗೆ ಪರಿಣತರ ತಂಡ ರಚಿಸುವ ಕುರಿತು ರಾಜ್ಯದ ವಕೀಲ ಫಾಲಿ ಎಸ್‌. ನಾರಿಮನ್‌ ಅವರನ್ನು ಮುಂದಿನ ವಾರ ಭೇಟಿ ಮಾಡಲು ಮಂಗಳವಾರ ನಡೆದ ವಿಧಾನಮಂಡಲದ ಉಭಯ ಸದನಗಳ ಸರ್ವ ಪಕ್ಷ ನಾಯಕರ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.
ಪರಿಣತರ ತಂಡ ರಚಿಸುವ ಬಗ್ಗೆ ರಾಜ್ಯದ ಅಭಿಪ್ರಾಯ ಅಥವಾ ಒಪ್ಪಿಗೆ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಪತ್ರ ಬರೆದಿತ್ತು  ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. 
ನಾರಿಮನ್‌ ಅವರನ್ನು ಮುಂದಿನ ವಾರ ಭೇಟಿ ಮಾಡಿ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಸರ್ಕಾರ ನಂತರ ಸೂಕ್ತ ನಿಲುವು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಪರಿಣತರ ತಂಡ ರಚನೆಯಿಂದಾಗುವ ಸಾಧಕ– ಬಾಧಕ, ಇದರಿಂದ ಕಾವೇರಿ ನ್ಯಾಯಮಂಡಳಿಯ ಅಂತಿಮ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ಮೇಲೆ ಆಗಲಿರುವ ಪರಿಣಾಮದ  ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ವಿವರಿಸಿದರು.
ಇದಕ್ಕೆ ಮುನ್ನ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ತಜ್ಞರು, ಸದನ ನಾಯಕರು ಹಾಗೂ ಈ ವಿಷಯದಲ್ಲಿ  ಹೆಚ್ಚಿನ ತಿಳಿವಳಿಕೆ ಇರುವ ಎಚ್‌.ಡಿ. ದೇವೇಗೌಡರ ಸಲಹೆ ಆಧರಿಸಿ ಮುಂದಿನ ಹೆಜ್ಜೆ ಇಡಲಾಗುವುದು’ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ