ಬೆಂಗಳೂರು: ಈ ವರ್ಷದ ಮುಂಗಾರು ಮಳೆ ಮೇ 29 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಕರ್ನಾಟಕ ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.
ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಜೂನ್ 1ರಂದು ನೈರುತ್ಯ ಮುಂಗಾರು ಮಾರುತ ಕೇರಳ ಪ್ರವೇಶಿಸಲಿದೆ, ಅದಾದ ನಾಲ್ಕು ಅಥವಾ ಐದು ದಿನಗಳ ನಂತರ ಕರ್ನಾಟಕ ಒಳನಾಡು ಪ್ರವೇಶಿಸಲಿದೆ ಎಂದು ತಿಳಿಸಿದೆ.
ಆದರೆ ಈ ಬಾರಿ ಅವದಿಗೂ ಮುನ್ನ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ . ಮೊಡಗಳ ಮಾಹಿತಿ, ಗಾಳಿ ಬೀಸುವಿಕೆ ಸೇರಿದಂತೆ ಇತೆ ಲಕ್ಷಣಗಳು ಈ ಬಾರಿ ಶೀಘ್ರವೇ ಅಂದರೆ ಮೇ 29ರ ಒಳಗೆ ಮಾನ್ಸೂನ್ ರಾಜ್ಯಕ್ಕೆ ಪ್ರವೇಶಿಸಲಿದೆ ಎಂಬುದನ್ನು ಹೇಳುತ್ತಿವೆ ಎಂದು ಕೆಎಸ್ಎನ್ ಡಿಎಂಸಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
2016ನೇ ವರ್ಷದಲ್ಲಿ ರಾಜ್ಯದಲ್ಲಿ ಕೇವಲ ಶೇ.26 ರಷ್ಟು ಮಾತ್ರ ಮಳೆಯಾಗಿತ್ತು. ಆದೆರ ಈ ವರ್ಷ ಉತ್ತಮ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ. ಈ ವರ್ಷದ ಜನವರಿ 1ರಿಂದ ಮೇ 9ರ ವರೆಗೆ ರಾಜ್ಯದಲ್ಲಿ 58 ಮಿಮಿ ಮಳೆಯಾಗಿದೆ. ಆದರೆ ಸಾಮಾನ್ಯವಾಗಿ ಈ ಅವಧಿಯಲ್ಲಿ 63 ಮಿಮೀ ಮಳೆಯಾಗುತ್ತಿತ್ತು. ಇದು ಉತ್ತಮ ಮಳೆಯಾಗುವ ಸೂಚಕವಾಗಿದೆ ಎಂದು ರೆಡ್ಡಿ ತಿಳಿಸಿದ್ದಾರೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಶೇ.10 ರಷ್ಟು ಹೆಚ್ಚು ವರಿ ಮಳೆಯಾಗಿದೆ.ಮಲೆನಾಡು ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos