ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 30 ಲಕ್ಷ ರು. ಮೌಲ್ಯದ ಚಿನ್ನಾಭರಣ ಧರಿಸಿದ್ದ ಫೈನಾನ್ಷಿಯರ್ 'ಗೋಲ್ಡನ್' ಸುರೇಶ್ ಹತ್ಯೆ

ಫೈನಾನ್ಷಿಯರ್ ಹಾಗೂ ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯನ್ನು ಆತನ ಅಪಾರ್ಟ್ ಮೆಂಟ್ ನಲ್ಲೇ ಕತ್ತು ಸೀಳಿ ಕೊಂದಿರುವ ಘಟನೆ ..

ಬೆಂಗಳೂರು: ಫೈನಾನ್ಷಿಯರ್ ಹಾಗೂ ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯನ್ನು ಆತನ ಅಪಾರ್ಟ್ ಮೆಂಟ್ ನಲ್ಲೇ ಕತ್ತು ಸೀಳಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಯನಗರ 7ನೇ ಬ್ಲಾಕ್ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ಕುಂದಾಪುರ ಮೂಲದ ಸುರೇಶ್ ಪೂಜಾರಿ ಅಲಿಯಾಸ್ ಗೋಲ್ಡನ್ ಸುರೇಶ್ ಕೊಲೆಯಾದ ವ್ಯಕ್ತಿ.
ಜಯನಗದರ ಜೆಎಸ್ ಎಸ್ ಸರ್ಕಲ್ ಬಳಿಯಿರುವ ಅಪಾರ್ಟ್ ಮೆಂಟ್ ನಲ್ಲಿ ಸುರೇಶ್ ಕಳೆದ ಒಂದೂವರೆ ವರ್ಷದಿಂದ ಬಾಡಿಗೆಗಿದ್ದರು, ಇಲ್ಲಿಯೇ ತಮ್ಮ ಹಣಕಾಸು ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.
ಸುರೇಶ್ ಸಹೋದರಿ ಆತನಿಗೆ ಕರೆ ಮಾಡಿದ್ದಾರೆ. ಸತತ ಕರೆಯ ನಂತರವೂ ಫೋನ್ ರಿಸೀವ್ ಮಾಡಿದಿದ್ದ ಹಿನ್ನೆಲೆಯಲ್ಲಿ ಆಕೆ ಅಪಾರ್ಟ್ ಮೆಂಟ್ ಗೆ ಬಂದಿದ್ದಾರೆ. ಮನೆಯ ಒಳಗೆ ಮೊಬೈಲ್ ರಿಂಗ್ ಆಗುತ್ತಿತ್ತು, ನಂತರ ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದು ನೋಡಿದಾಗ ಸುರೇಶ್ ಮೃತ ದೇಹ ಪತ್ತೆಯಾಗಿದೆ.
ನಂತರ ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸಿದ್ದಾರೆ. ಪರಿಚಯಸ್ಥರೇ ಸುರೇಶ್ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸುರೇಶ್ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪಹರಣ, ಬೆದರಿಕೆ ಸೇರಿದಂತೆ ಹಲವು ದೂರುಗಳು ದಾಖಲಾಗಿದ್ದವು, ಜೊತೆಗೆ ನಗರದ ಹಲವು ರೌಡಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಸುರೇಶ. ರೌಡಿ ಶೀಟರ್ ಹೆಬ್ಬೆಟ್ಟು ಮಂಜನ ಸಹಚರನಾಗಿದ್ದ. ಇವನನ್ನು ಗೋಲ್ಡನ್ ಸುರೇಶ ಎಂಬ ಅಡ್ಡ ಹೆಸರಿನಿಂದ ಕರೆಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆತ ಸಾಯುವಾಗಲು 30 ಲಕ್ಷ ರು ಮೌಲ್ಯದ ಚಿನ್ನಭಾರಣ ಧರಿಸಿದ್ದ. ಮಂಗಳವಾರ ರಾತ್ರಿ ನಡೆದ ಪಾರ್ಟಿಯಲ್ಲಿ ಸುರೇಶ್ ಸ್ನೇಹಿತರ ಜೊತೆ ಕಾಣಿಸಿಕೊಂಡಿದ್ದ, ಪ್ರಕರಣ ದಾಖಲಿಸಿಕೊಂಡಿರುವ ಜಯನಗರ ಪೊಲಿಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT