ಗಿರೀಶ್ 
ರಾಜ್ಯ

ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದ ಎಸಿಬಿ ಎಸ್ಪಿಗೆ ಎತ್ತಂಗಡಿ ಶಿಕ್ಷೆ!

ಇತ್ತೀಚೆಗಷ್ಟೇ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದ ಎಸಿಬಿ ಎಸ್ಪಿ ಗಿರೀಶ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ.

ಬೆಂಗಳೂರು: ಇತ್ತೀಚೆಗಷ್ಟೇ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದ ಎಸಿಬಿ ಎಸ್ಪಿ ಗಿರೀಶ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ. 
ಗಿರೀಶ್ ಎಸಿಬಿ ಎಸ್ಪಿ ಆಗಿ ಅಧಿಕಾರ ವಹಿಸಿಕೊಂಡ ನಂತರ ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದು ಹಲವು ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದರು. ಇತ್ತೀಚೆಗಷ್ಟೇ ಬಿಬಿಎಂಪಿ ಪೂರ್ವವಲಯದ ಹೆಚ್ಚುವರಿ ಆಯುಕ್ತ ಯತೀಶ್ ಕುಮಾರ್ ಮನೆ ಮೇಲೆ ದಾಳಿ ಮಾಡಿದ್ದರು.  
ಎಸಿಬಿ ದಾಳಿಯಲ್ಲಿ ಪ್ರಮುಖವಾಗಿ ಕಾರ್ಪೋರೇಟರ್ ಕೃಷ್ಣಮೂರ್ತಿ, ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಯೋಜನಾಧಿಕಾರಿ ಎಸ್ಸಿ ಜಯಚಂದ್ರ ಅವರ ಮನೆ ಮೇಲೂ ದಾಳಿ ಮಾಡಲಾಗಿತ್ತು. ಇದರಿಂದಾಗಿ ಗಿರೀಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಎನ್ನಲಾಗುತ್ತಿದೆ.
ಎಸ್ ಗಿರೀಶ್ ಅವರು ಅಧಿಕಾರ ವಹಿಸಿಕೊಂಡ ಐದೇ ತಿಂಗಳಲ್ಲಿ ಅವರನ್ನು ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ ಟಿಡಿ ಪವಾರ್ ರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT