ಸಂಗ್ರಹ ಚಿತ್ರ 
ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಮಠಕ್ಕೆ ವಾಪಸ್!

ಪಿತ್ತನಾಳದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶನಿವಾರ ಬಿಜಿಎಸ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡು ತುಮಕೂರು ಸಿದ್ದಗಂಗಾ ಮಠಕ್ಕೆ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಪಿತ್ತನಾಳದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶನಿವಾರ ಬಿಜಿಎಸ್‌ ಆಸ್ಪತ್ರೆಯಿಂದ  ಬಿಡುಗಡೆಗೊಂಡು ತುಮಕೂರು ಸಿದ್ದಗಂಗಾ ಮಠಕ್ಕೆ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆ ಮೂಲಗಳು ತಿಳಿಸಿರುವಂತೆ "ಸ್ವಾಮೀಜಿ ಅವರಿಗೆ ಪಿತ್ತನಾಳದ ಸೋಂಕಿನಿಂದ ಜ್ವರ ಬಂದಿತ್ತು. ಕಳೆದ ವರ್ಷ ಪಿತ್ತನಾಳಕ್ಕೆ ಸ್ಟೆಂಟ್‌ ಅಳವಡಿಸಿದ್ದೆವು. ಆದರೆ ಆ ಸ್ಟಂಟ್ ಬ್ಲಾಕ್‌ ಆಗಿತ್ತು. ಶುಕ್ರವಾರ ಅದನ್ನು ತೆಗೆದು ಹೊಸ  ಸ್ಟೆಂಟ್‌ ಅಳವಡಿಸಲಾಗಿತ್ತು. ಇದಕ್ಕೆ ಸ್ವಾಮೀಜಿ ಚೆನ್ನಾಗಿ ಸ್ಪಂದಿಸಿದ್ದು, ಅವರ ಆರೋಗ್ಯ ಈಗ ಸುಧಾರಿಸಿದೆ. ಪ್ರಸ್ತುತ ಸ್ವಾಮೀಜಿ ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ಅವರ ಆರೋಗ್ಯದ ನಿಗಾ ವಹಿಸಲು ಆಸ್ಪತ್ರೆಯ ಮೂರು ಮಂದಿ  ವೈದ್ಯರು ಸ್ವಾಮೀಜಿ ಅವರೊಂದಿಗೆ ಸಿದ್ದಗಂಗಾ ಮಠಕ್ಕೆ ತೆರಳಲಿದ್ದಾರೆ’ ಎಂದು ವೈದ್ಯರು ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ 12.20ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರನ್ನು ಆಸ್ಪತ್ರೆಯಿಂದ ಕಾರಿನಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT