ನೆಲಕ್ಕೆ ಮುರಿದು ಬಿದ್ದಿರುವ ಮರ 
ರಾಜ್ಯ

ಬೆಂಗಳೂರು: ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ 9 ಮರಗಳು

ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ರಾಜಧಾನಿಯಲ್ಲಿ 9 ಮರಗಳು ಹಾಗೂ ಹಲವು ವಿದ್ಯುತ್ ಕಂಬಗಳು ..

ಬೆಂಗಳೂರು: ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ರಾಜಧಾನಿಯಲ್ಲಿ 9 ಮರಗಳು ಹಾಗೂ ಹಲವು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ದೊಮ್ಮಲೂರು 33ಮಿಮೀ, ಅಗ್ರಹಾರ 32.5 ಮಿಮೀ, ಕೋರಮಂಗಲದಲ್ಲಿ 31.5 ಮಿಮೀ ಮಳೆಯಾಗಿದೆ.ಸೋಮವಾರ ಸಂಜೆ ಕೂಡ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಸಹಾಯವಾಣಿಯ ಮಾಹಿತಿಯಂತೆ 9 ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬ ಮುರಿದು ಬಿದ್ದಿರುವ ಸಂಬಂಧ ಬೆಸ್ಕಾಂ ಹೆಲ್ಪ್ ಲೈನ್ ಗೆ ಸುಮಾರು 25 ದೂರುಗಳು ದಾಖಲಾಗಿವೆ. 
ಕೋರಮಂಗಲ ಉಪ ವಿಭಾಗವೊಂದರಲ್ಲೇ ಸುಮಾರು 10 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಬಗ್ಗೆ ದೂರು ದಾಖಲಾಗಿದೆ. ಎಲೆಕ್ಟ್ರಾನಿಕ್ ಸಿಟಿ2ನೇ ಹಂತದಲ್ಲಿ 4 ಕೇಂಬ್ರಿಡ್ಜ್ ರಸ್ತೆ ಮತ್ತು ಎಚ್ ಎಸ್ ಎರ್ ಲೇಔಟ್ ನಲ್ಲಿ ತಲಾ 4 ಕಂಬಗಳು ಉರುಳಿ ಬಿದ್ದಿವೆ. ಇದರಿಂದಾಗಿ ನಗರದ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಯಿತು.
ಧಾರವಾಡ, ಉತ್ತರ ಕನ್ನಡದ ಕೆಲ ಭಾಗಗಳು, ಹಾವೇರಿ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಿದೆ.
ದಾವಣಗೆರೆ ಜಿಲ್ಲೆ ತೋರಣಗಟ್ಟಿ ತಾಲೂಕಿನ ಜಗಳೂರಿನಲ್ಲಿ ದಾಖಲೆಯ 64.5ಮಿಮೀ ಮಳೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT