ಸಾಂದರ್ಭಿಕ ಚಿತ್ರ 
ರಾಜ್ಯ

ಇಂದಿನಿಂದ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಆನೆಗಣತಿ

ಇಂದಿನಿಂದ ರಾಜ್ಯಾದ್ಯಾಂತ ಆನೆ ಗಣತಿ ಪ್ರಾರಂಭವಾಗಲಿದ್ದು, ಕರ್ನಾಟಕದ 13 ಅರಣ್ಯ ಪ್ರದೇಶಗಳಲ್ಲಿ ನಾಲ್ಕು ದಿನಗಳ ಕಾಲ ಆನೆ ಗಣತಿ..

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಾಂತ ಆನೆ ಗಣತಿ ಪ್ರಾರಂಭವಾಗಲಿದ್ದು, ಕರ್ನಾಟಕದ 13 ಅರಣ್ಯ ಪ್ರದೇಶಗಳಲ್ಲಿ ನಾಲ್ಕು ದಿನಗಳ ಕಾಲ ಆನೆ ಗಣತಿ ನಡೆಯಲಿದೆ.
ದೇಶದಲ್ಲೇ ಅತಿ ಹೆಚ್ಚು ಆನೆಗಳನ್ನ ಹೊಂದಿರುವಂತಹ ಬಂಡೀಪುರ-ನಾಗರಹೊಳೆ ಅರಣ್ಯ ಪ್ರದೇಶ ಸೇರಿದಂತೆ ಆನೆಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಆನೆ ಗಣತಿ ನಡೆಯಲಿದೆ. ಈಗಾಗಲೇ ಸ್ವಯಂ ಸೇವಕರು ಬೆಂಗಳೂರಿನ ಅರಣ್ಯ ಭವನದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 
2012 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಆನೆಗಣತಿಯ ಮಾಹಿತಿ ಪ್ರಕಾರ, 6062 ಆನೆಗಳಿದ್ದವು ಎಂದು ವನ್ಯಜೀವಿ ವಿಭಾಗದ ಹೆಚ್ಚುವರಿ ಪಿಸಿಸಿಎಫ್ ಜಯರಾಮ್ ಹೇಳುತ್ತಾರೆ.
650 ಮಂದಿ ಸ್ವಯಂ ಸೇವಕರು ಹಾಗೂ 98 ಮಂದಿ ಸಂಶೋಧಕರು ಭಾಗವಹಿಸಲಿದ್ದು, ಎಲ್ಲಾ ಸಿದ್ಧತೆಗಳು ನಡೆದಿವೆ. ಪ್ರತಿಯೊಂದು ಅರಣ್ಯವನ್ನು ಸಣ್ಣ ಸಣ್ಣ ಘಟಕಗಳನ್ನಾಗಿ ವಿಭಜಿಸಿಕೊಂಡು ಗಣನತಿ ಮಾಡಲಾಗುತ್ತದೆ. 
ಇಂದಿನಿಂದ 19ರವರೆಗೆ ನಾಲ್ಕು ದಿನಗಳ ಕಾಲ ನಡೆಯುವ ಆನೆ ಗಣತಿ ರಾಜ್ಯದ 13 ಅರಣ್ಯ ಪ್ರದೇಶಗಳಲ್ಲಿ ನಡೆಯಲಿದೆ. ಇನ್ನು ದೇಶದಲ್ಲೇ ಆನೆ ಕಾರಿಡಾರ್ ಎಂದು ಪ್ರಸಿದ್ಧಿಯಾಗಿರುವ ಬಂಡೀಪುರ-ನಾಗರಹೊಳೆ ಪ್ರದೇಶದಲ್ಲಿ 2011, 2013, 2015 ರಲ್ಲಿ ನಡೆದ ಆನೆ ಗಣತಿ ಸಂದರ್ಭದಲ್ಲಿ ಆನೆಗಳ ಸಂತತಿ ಹೆಚ್ಚಾಗುತ್ತಿರುವ ಬಗ್ಗೆ ಅಂಕಿ ಅಂಶಗಳಿಂದ ತಿಳಿದು ಬಂದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT