ಸಾಂದರ್ಭಿಕ ಚಿತ್ರ 
ರಾಜ್ಯ

ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಜೂನ್ ನಿಂದ ಚೂಡಿದಾರ್ ಭಾಗ್ಯ

ಜ್ಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸ್ಕರ್ಟ್ ಗೆ ಬದಲಾಗಿ ಸಲ್ವಾರ್ ಕಮೀಜ್ ...

ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸ್ಕರ್ಟ್ ಗೆ ಬದಲಾಗಿ ಸಲ್ವಾರ್ ಕಮೀಜ್ ಸಮವಸ್ತ್ರ ವಿತರಿಸಲಾಗುವುದು.
ವಿದ್ಯಾರ್ಥಿನಿಯರಿಗೆ ಸಮವಸ್ತ್ರವಾಗಿ ನೀಲಿ ಮತ್ತು ಗಾಢ ನೀಲಿ ಬಣ್ಣದ ಚೂಡಿದಾರ್ ನೀಡಲಾಗುವುದು. ಹೊಸ ಸಮವಸ್ತ್ರವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 8ರಿಂದ 10ನೇ ತರಗತಿಯಲ್ಲಿ ಒಟ್ಟು 8.5 ಲಕ್ಷ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. 
ಕಳೆದ ವರ್ಷ ಶಾಲೆಗಳಲ್ಲಿ  ದಾಖಲಾದ  ಸರಣಿ ಲೈಂಗಿಕ ದೌರ್ಜನ್ಯಗಳಿಂದಾಗಿ ವಿದ್ಯಾರ್ಥಿನಿಯರಿಗೆ ಚೂಡಿದಾರ್ ನೀಡಲು ನಿರ್ಧರಿಸಲಾಗಿದೆ.
2016-17 ನೇ ಸಾಲಿನಲ್ಲಿ  ಮುಖ್ಯಮಂತ್ರಿಗಳು ಚೂಡಿದಾರ್ ಭಾಗ್ಯ ಘೋಷಿಸಿದರು. ಆದರೆ 1 ವರ್ಷದ ನಂತರ ಶಿಕ್ಷಣ ತಜ್ಞರು, ಅಧಿಕಾರಿಗಳು ಮತ್ತು ಶಿಕ್ಷಕರ ಜೊತೆ ಸಮಾಲೋಚಿಸಿ ಈ ವರ್ಷದಿಂದ ಅನಪ್ಠಾನಗೊಳಿಸಲಾಗುತ್ತಿದೆ.
ಸರ್ಕಾರ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸಮವಸ್ತ್ರ ನೀಡುತ್ತಿದ್ದು, ಇದಕ್ಕಾಗಿ ಸರ್ಕಾರಕ್ಕೆ 75 ಕೋಟಿ ರು. ಹೊರೆ ಬೀಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT