ರಾಜ್ಯ

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣು

Vishwanath S
ಬೆಂಗಳೂರು: ಸಾಫ್ಟ್ ವೇರ್ ಇಂಜಿನಿಯರ್ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಿವಾಸಿ ಸುನೀಲ್ ಕುಮಾರ್ ಎಂಬುವರು ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ನಗರದ ಕೋರಮಂಗಲ ಖಾಸಗಿ ಕಂಪನಿ ಒರೆಕಲ್ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಕಳೆದ ಒಂದು ವರ್ಷದಿಂದ ಸಹೋದ್ಯೋಗಿ ಟೆಕ್ಕಿಯನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. 
ಕಳೆದ ಮೂರು ತಿಂಗಳಿನಿಂದ ಸುನೀಲ್ ಪ್ರೇಯಸಿಗೆ ಪ್ರೇಮ ನಿವೇದನೆ ಮಾಡುತ್ತಾ ಬಂದಿದ್ದರು. ಆಕೆ ಅದನ್ನು ತಿರಸ್ಕರಿಸುತ್ತಾ ಬಂದಿದ್ದಳು. ಕಳೆದ ರಾತ್ರಿ ತನ್ನ ಪ್ರೇಯಸಿಯನ್ನು ಸ್ನೇಹಿತನೊಬ್ಬನ ಮೂಲಕ ಮಾತುಕತೆಗೆ ಕರೆದಿದ್ದನು ಎನ್ನಲಾಗಿದೆ. ಈ ವೇಳೆ ಆಕೆ ತಾನು ಇನ್ನೊಬ್ಬರನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದು ಇದರಿಂದ ಮನನೊಂದು ಸ್ನೇಹಿತನ ರೂಂನಲ್ಲೇ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 
SCROLL FOR NEXT