ಸಾಂದರ್ಭಿಕ ಚಿತ್ರ 
ರಾಜ್ಯ

ಹೈಕೋರ್ಟ್ ಆದೇಶವಿದ್ದರೂ ಆರ್ ಟಿಇ ಮಕ್ಕಳಿಗೆ ಪ್ರವೇಶ ನೀಡದ ಡಿಕೆಶಿ ಶಾಲೆ

ಹೈಕೋರ್ಟ್ ನಿರ್ದೇಶನವಿದ್ದರೂ ರಾಜರಾಜೇಶ್ವರಿ ನಗರದಲ್ಲಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಒಡೆತನದ ನ್ಯಾಷನಲ್‌....

ಬೆಂಗಳೂರು: ಹೈಕೋರ್ಟ್ ನಿರ್ದೇಶನವಿದ್ದರೂ ರಾಜರಾಜೇಶ್ವರಿ ನಗರದಲ್ಲಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಒಡೆತನದ ನ್ಯಾಷನಲ್‌ ಹಿಲ್‌ವೀವ್‌ ಶಾಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) 24 ಮಕ್ಕಳಿಗೆ ಪ್ರವೇಶ ನಿರಾಕರಿ­ಸಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಆರ್ ಟಿಇ ಮಕ್ಕಳ ಪೋಷಕರು ಪ್ರವೇಶಕ್ಕಾಗಿ ಶಾಲಾ ಆಡಳಿತ ಮಂಡಳಿಯನ್ನು ಭೇಟಿ ಮಾಡಿದ್ದಾರೆ. ಆದರೆ ಪ್ರವೇಶ ನೀಡಲು ನಿರಾಕರಿಸಿದ ಶಾಲಾ ಸಿಬ್ಬಂದಿ, ತಮ್ಮ ಶಾಲೆಯ ಅಧ್ಯಕ್ಷರಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಪತ್ರ ತೆಗೆದುಕೊಂಡು ಬರುವಂತೆ ಪೋಷಕರಿಗೆ ಸೂಚಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಸಿಬಿಎಸ್ ಇಯಿಂದ ಮಾನ್ಯತೆ ಪಡೆದಿರುವ ಹಿಲ್ ವೀವ್ ಶಾಲೆಯಲ್ಲಿ ಆರ್ ಟಿಇ ಅಡಿ 1ನೇ ತರಗತಿಗೆ ಸೀಟ್ ಹಂಚಿಕೆಯಾಗಿದ್ದ 24 ಮಕ್ಕಳಿಗೆ ಪ್ರವೇಶ ನಿರಾಕರಿಸಲಾಗಿತ್ತು. ಹೀಗಾಗಿ ಪೋಷಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಭೇಟಿ ಮಾಡಿದ್ದರು. ಅವರು ಪ್ರವೇಶ ಕೊಡಿಸುವ ಭರವಸೆ ನೀಡಿದ್ದರು. ಆದರೆ ಪ್ರವೇಶ ಕೊಡಿಸುವ ಬಗ್ಗೆ ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಹೀಗಾಗಿ ನಾವು ಹೈಕೋರ್ಟ್ ಮೊರೆ ಹೋಗಿದ್ದೇವು. ಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ ಪ್ರವೇಶ ನೀಡುವಂತೆ ಶಾಲೆಗೆ ಸೂಚಿಸಿದೆ ಎಂದು ಪೋಷಕರೊಬ್ಬರು ತಿಳಿಸಿದ್ದಾರೆ.
ಹೈಕೋರ್ಟ್ ಆದೇಶದೊಂದಿಗೆ ನಾವು ಶಾಲಾ ಪ್ರಾಚಾರ್ಯರನ್ನು ಭೇಟಿ ಮಾಡಿದ್ದೇವೆ. ಅವರು ಈ ಕುರಿತು ಸುಮಾರು ಒಂದು ಗಂಟೆ ಚರ್ಚಿಸಿದ ಬಳಿಕ, ಪ್ರವೇಶ ಪಡೆಯಲು ಶಾಲಾ ಅಧ್ಯಕ್ಷರಿಂದ ಪತ್ರ ತರುವಂತೆ ನಮಗೆ ಸೂಚಿಸಿದ್ದಾರೆ. ಆದರೆ ಇನ್ನು ಎರಡು ದಿನ ನಾವು ಕಾಯುತ್ತಿವೆ. ಒಂದು ವೇಳೆ ಪ್ರವೇಶ ನೀಡದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮತ್ತೊಬ್ಬ ಪೋಷಕರು ಎಚ್ಚರಿಸಿದ್ದಾರೆ. 
ಡಿ.ಕೆ.ಶಿವಕುಮಾರ್ ಅವರು ಈ ಶಾಲೆಯ ಅಧ್ಯಕ್ಷರಾಗಿದ್ದು, ಶಾಲೆಯಲ್ಲಿ ಆರ್‌ಟಿಇ ಅಡಿ ಲಭ್ಯ­ವಿದ್ದ ಸೀಟಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಅರ್ಜಿ ಸಲ್ಲಿಸಿ, ಆನ್‌ಲೈನ್‌ ಸೀಟು ಹಂಚಿಕೆ ಪ್ರಕ್ರಿಯೆ ಮೂಲಕವೇ ಸೀಟು ಪಡೆದ ಮಕ್ಕಳಿಗೆ ಪ್ರವೇಶ ನಿರಾಕರಿಸುವ ಮೂಲಕ ಶಾಲಾಡಳಿತ ಮಂಡಳಿ ಸರ್ಕಾರದ ಆದೇಶ ಉಲ್ಲಂಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT