ಸಕಾಲ 
ರಾಜ್ಯ

ಬೆಂಗಳೂರು ವಿವಿಯಲ್ಲಿ ಜೂನ್ 1 ರಿಂದ 'ಸಕಾಲ' ಜಾರಿ

ಜೂನ್ 1 ರಿಂದ ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಸಕಾಲ ಯೋಜನೆ ಜಾರಿಗೆ ಬರಲಿದ್ದು, ಪರೀಕ್ಷೆ ಹಾಗೂ ಮೌಲ್ಯಮಾಪನ ಸಂಬಂಧಿತ ಸೇವೆಗಳ ಬಗ್ಗೆ ಶೀಘ್ರವೇ ....

ಬೆಂಗಳೂರು: ಜೂನ್ 1 ರಿಂದ ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಸಕಾಲ ಯೋಜನೆ ಜಾರಿಗೆ ಬರಲಿದ್ದು, ಪರೀಕ್ಷೆ ಹಾಗೂ ಮೌಲ್ಯಮಾಪನ ಸಂಬಂಧಿತ ಸೇವೆಗಳ ಬಗ್ಗೆ ಶೀಘ್ರವೇ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಪರೀಕ್ಷಾ ವಿಭಾಗ, ಸೂಪರಿಂಡೆಂಟ್ಸ್, ಅಧಿಕಾರಿಗಳು ಮತ್ತು ಕಂಪ್ಯೂಟರ್ ವಿಭಾಗದ ಸಿಬ್ಬಂದಿ ಜೊತೆ ನಡೆದ ಸಭೆಯಲ್ಲಿ ಪೈಲಟ್ ಬೇಸಿಸ್ ಮೇಲೆ ಏಪ್ರಿಲ್ 1 ರಿಂದ ಯೋಜನೆ ಅನುಷ್ಠಾನಗೊಂಡಿದೆ.
ಈ ಮೊದಲು ಪದವಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಸುಮಾರು 15 ರಿಂದ 20 ದಿನಗಳ ಕಾಲ ಸಮಯಬೇಕಾಗಿತ್ತು. ಆದರೆ ಸಕಲಾ ಜಾರಿಯಾದ ನಂತರ,  ಅಷ್ಟು ಸಮಯ ಕಾಯುವ ಆಗಿಲ್ಲ, ಕೇವಲ ಮೂರರಿಂದ 4 ದಿನಗಳಲ್ಲೇ ಪ್ರಮಾಣಪತ್ರ ದೊರೆಯುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಸಕಾಲ ಯೋಜನೆಯಡಿ ಬರುವ ಸೇವೆಗಳ ಮಾಹಿತಿ ಬಗ್ಗೆ ವಿವಿ ಪರೀಕ್ಷಾ ವಿಭಾಗ ಪಟ್ಟಿ ಮಾಡಲಿದೆ. ಎರಡು ದಿನಗಳಲ್ಲಿ ತಾತ್ಕಾಲಿಕ ಪದವಿ ಪ್ರಮಾಣಪತ್ರ, ವಲಸೆ ಪ್ರಮಾಣ ಪತ್ರ, ಸೇರಿದಂತೆ ಪಿಎಚ್ ಡಿ ಫಲಿತಾಂಶ ಪ್ರಕಟಿಸಲಾಗುವುದು. 
ಈ ಹಿಂದೆ ಪದವಿ ಪ್ರಮಾಣ ಪತ್ರ ಪಡೆಯಲು ತಿಂಗಳು ಗಟ್ಟಲೇ ಕಾಯಬೇಕಾಗುತ್ತಿತ್ತು. ಆದರೆ ಈಗ ಕೇವಲ ಎರಡು ಮೂರು ದಿನಗದಳಲ್ಲಿ ಪ್ರಮಾಣ ಪತ್ರಸಿಗುವಂತಾಗಿರುವುದು ಸಂತಸ ತಂದಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT