ಸಕಾಲ 
ರಾಜ್ಯ

ಬೆಂಗಳೂರು ವಿವಿಯಲ್ಲಿ ಜೂನ್ 1 ರಿಂದ 'ಸಕಾಲ' ಜಾರಿ

ಜೂನ್ 1 ರಿಂದ ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಸಕಾಲ ಯೋಜನೆ ಜಾರಿಗೆ ಬರಲಿದ್ದು, ಪರೀಕ್ಷೆ ಹಾಗೂ ಮೌಲ್ಯಮಾಪನ ಸಂಬಂಧಿತ ಸೇವೆಗಳ ಬಗ್ಗೆ ಶೀಘ್ರವೇ ....

ಬೆಂಗಳೂರು: ಜೂನ್ 1 ರಿಂದ ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಸಕಾಲ ಯೋಜನೆ ಜಾರಿಗೆ ಬರಲಿದ್ದು, ಪರೀಕ್ಷೆ ಹಾಗೂ ಮೌಲ್ಯಮಾಪನ ಸಂಬಂಧಿತ ಸೇವೆಗಳ ಬಗ್ಗೆ ಶೀಘ್ರವೇ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಪರೀಕ್ಷಾ ವಿಭಾಗ, ಸೂಪರಿಂಡೆಂಟ್ಸ್, ಅಧಿಕಾರಿಗಳು ಮತ್ತು ಕಂಪ್ಯೂಟರ್ ವಿಭಾಗದ ಸಿಬ್ಬಂದಿ ಜೊತೆ ನಡೆದ ಸಭೆಯಲ್ಲಿ ಪೈಲಟ್ ಬೇಸಿಸ್ ಮೇಲೆ ಏಪ್ರಿಲ್ 1 ರಿಂದ ಯೋಜನೆ ಅನುಷ್ಠಾನಗೊಂಡಿದೆ.
ಈ ಮೊದಲು ಪದವಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಸುಮಾರು 15 ರಿಂದ 20 ದಿನಗಳ ಕಾಲ ಸಮಯಬೇಕಾಗಿತ್ತು. ಆದರೆ ಸಕಲಾ ಜಾರಿಯಾದ ನಂತರ,  ಅಷ್ಟು ಸಮಯ ಕಾಯುವ ಆಗಿಲ್ಲ, ಕೇವಲ ಮೂರರಿಂದ 4 ದಿನಗಳಲ್ಲೇ ಪ್ರಮಾಣಪತ್ರ ದೊರೆಯುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಸಕಾಲ ಯೋಜನೆಯಡಿ ಬರುವ ಸೇವೆಗಳ ಮಾಹಿತಿ ಬಗ್ಗೆ ವಿವಿ ಪರೀಕ್ಷಾ ವಿಭಾಗ ಪಟ್ಟಿ ಮಾಡಲಿದೆ. ಎರಡು ದಿನಗಳಲ್ಲಿ ತಾತ್ಕಾಲಿಕ ಪದವಿ ಪ್ರಮಾಣಪತ್ರ, ವಲಸೆ ಪ್ರಮಾಣ ಪತ್ರ, ಸೇರಿದಂತೆ ಪಿಎಚ್ ಡಿ ಫಲಿತಾಂಶ ಪ್ರಕಟಿಸಲಾಗುವುದು. 
ಈ ಹಿಂದೆ ಪದವಿ ಪ್ರಮಾಣ ಪತ್ರ ಪಡೆಯಲು ತಿಂಗಳು ಗಟ್ಟಲೇ ಕಾಯಬೇಕಾಗುತ್ತಿತ್ತು. ಆದರೆ ಈಗ ಕೇವಲ ಎರಡು ಮೂರು ದಿನಗದಳಲ್ಲಿ ಪ್ರಮಾಣ ಪತ್ರಸಿಗುವಂತಾಗಿರುವುದು ಸಂತಸ ತಂದಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT