ರಾಜ್ಯ

ರೌಡಿ ನಾಗರಾಜ ಮತ್ತೆ ಮೂರು ದಿನ ಪೊಲೀಸ್ ಕಸ್ಟಡಿಗೆ

Shilpa D
ಬೆಂಗಳೂರು: ರೌಡಿ ವಿ.ನಾಗರಾಜ್‌ ಹಾಗೂ ಆತನ ಮಕ್ಕಳಾದ ಗಾಂಧಿ, ಶಾಸ್ತ್ರಿಯನ್ನು ಮತ್ತೆ ಮೇ 25ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.
ಹತ್ತು ದಿನಗಳ  ಕಸ್ಟಡಿ ಅವಧಿ ಮುಗಿದಿದ್ದರಿಂದ ಹೆಣ್ಣೂರು ಠಾಣೆಯ ಪೊಲೀಸರು ಆರೋಪಿಗಳನ್ನು ನಗರದ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣ ಸಂಬಂದ ಮತ್ತಷ್ಟು ಮಂದಿಯನ್ನು ಬಂಧಿಸಬೇಕಾಗಿದೆ. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ಯಬೇಕಿದೆ. ಹೀಗಾಗಿ ಕಸ್ಟಡಿ ಅವಧಿಯನ್ನು ವಿಸ್ತರಿಸಬೇಕು ಎಂದು ಪೊಲೀಸರು ಮನವಿ ಮಾಡಿದರು. ನಾಗರಾಜನ ಪತ್ನಿ ಲಕ್ಷ್ಮಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
SCROLL FOR NEXT