ಅನುರಾಗ್ ತಿವಾರಿ 
ರಾಜ್ಯ

ಅನುರಾಗ್ ತಿವಾರಿ ಯಾವ ಹಗರಣವನ್ನು ಪತ್ತೆಹಚ್ಚಿರಲಿಲ್ಲ: ಹರ್ಷ ಗುಪ್ತ

ಮೃತ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ 2ಸಾವಿರ ಕೋಟಿ ರು. ಮೌಲ್ಯದ ಹಗರಣವನ್ನು ಬಯಲಿಗೆಳೆಯಲು ತಯಾರಿ ನಡೆಸುತ್ತಿದ್ದರು..

ಕಲಬುರಗಿ: ಮೃತ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ 2ಸಾವಿರ  ಕೋಟಿ ರು. ಮೌಲ್ಯದ ಹಗರಣವನ್ನು ಬಯಲಿಗೆಳೆಯಲು ತಯಾರಿ ನಡೆಸುತ್ತಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ, ತಿವಾರಿ ಯಾವುದೇ ಹಗರಣವನ್ನು ಪತ್ತೆ ಹಚ್ಚಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಅನುರಾಗಿ ತಿವಾರಿ ಬಹು ದೊಡ್ಡ ಹಗರಣವನ್ನು ಪತ್ತೆ ಹಚ್ಚಿದ್ದು, ಅದಕ್ಕಾಗಿ ಅವರಿಗೆ ಬೆದರಿಕೆ ಬರುತ್ತಿದ್ದವು ಎಂಬ ಕುಟುಂಬಸ್ಥರು ಆರೋಪಿಸಿದ್ದರು. ಜೊತೆಗೆ ಅನುರಾಗ್ ತಿವಾರಿ ಅವರದ್ದು ಕೊಲೆ ಎಂದು ಅವರ ಸಹೋದರ ದೂರು ದಾಖಲಿಸಿದ ನಂತರ ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ, ಆದರೆ ತಿವಾರಿ ಯಾವುದೇ ಹಗರಣ ಕಂಡು ಹಿಡಿದಿರಲಿಲ್ಲ ಎಂದು ಗುಪ್ತ ತಿಳಿಸಿದ್ದಾರೆ.
ಕರ್ತವ್ಯಕ್ಕೆ ಬದ್ದವಾಗಿರುವ ಯಾವುದೇ ಅಧಿಕಾರಿ ಈ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಕರ್ತವ್ಯ ಬದ್ದ ಅಧಿಕಾರಿಯಾಗಿದ್ದ ತಿವಾರಿ  ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದರು. ಅವರು ಯಾವುದೇ ಹಗರಣವನ್ನು ಪತ್ತೆ ಹಚ್ಚಿರಲಿಲ್ಲ. ಮೊದಲಿಗೆ ಯಾವುದೇ ಹಗರಣಗಳು ಕೂಡ ಇಲಾಖೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ. 
ಅನ್ನಭಾಗ್ಯ ಅಕ್ಕಿ ಖರೀದಿಯಲ್ಲಿ ಭಾರೀ ಮಟ್ಟದ ಗೋಲ್ ಮಾಲ್ ನಡೆದಿದ್ದು ಅದನ್ನು ಅನುರಾಗ್ ತಿವಾರಿ ಪತ್ತೆ ಹಚ್ಚಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT