ಬಂಧಿತ ಪಾಕಿಸ್ತಾನ ಪ್ರಜೆಗಳು 
ರಾಜ್ಯ

ಬೆಂಗಳೂರು: ಬಂಧಿತ ಪಾಕ್ ಪ್ರಜೆಗಳು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ- ಅಧಿಕಾರಿಗಳು

ನಗರದಲ್ಲಿ ಅಕ್ರಮವಾಗಿ ನೆಲೆಸಿದ ಆರೋಪದಡಿ ಪೊಲೀಸರ ಬಲೆಗೆ ಬಿದ್ದಿರುವ ಪಾಕಿಸ್ತಾನ ಪ್ರಜೆಗಳು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂದು ಶನಿವಾರ ತಿಳಿದುಬಂದಿದೆ...

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ ಆರೋಪದಡಿ ಪೊಲೀಸರ ಬಲೆಗೆ ಬಿದ್ದಿರುವ ಪಾಕಿಸ್ತಾನ ಪ್ರಜೆಗಳು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂದು ಶನಿವಾರ ತಿಳಿದುಬಂದಿದೆ. 
ಕರಾಚಿ ನಿವಾಸಿಯಾಗಿರುವ ಸಮೀರಾ (25) ಎಂಬಾಕೆಯನ್ನು ಕೇರಳ ರಾಜ್ಯಕ್ಕೆ ಕರೆ ತರುವಂತೆ ಪಾಷಾ ಎಂಬ ವ್ಯಕ್ತಿ ಮೊಹಮ್ಮದ್ ಶಾಹಿಬ್ (30) ಎಂಬುವವರಿಗೆ ತಿಳಿಸಿದ್ದ. ಅಲ್ಲದೆ ಪಾಷಾ ಕೇರಳದಿಂದಲೇ ಸಮೀರಾ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಿದ್ದ. ಇದೀಗ ಸಮೀರಾ ಸಂಬಂಧಿಕರಾಗಿರುವ ಕಿರೊಣ್ ಗುಲಾಂ ಅಲಿ ಹಾಗೂ ಕ್ವಾಸಿಬ್ ಶಂಸುದ್ದೀನ್ ಎಂಬುವವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 
ವಿಚಾರಣೆ ವೇಳೆ ಬಂಧಿತರು ತಮ್ಮ ಪ್ರೇಮಕ್ಕೆ ಕುಟುಂಬದವರಿಂದ ವಿರೋಧ ವ್ಯಕ್ತವಾದ ಕಾರಣಕ್ಕೆ ಜೀವ ಭಯದಿಂದ ಭಾರತಕ್ಕೆ ಬಂದಿದ್ದಾಗಿ ಪುನರುಚ್ಚರಿಸಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು, ನಗರದಲ್ಲಿ ಅವರು ಸ್ನೇಹ ಹೊಂದಿದ್ದವರ ಬಗ್ಗೆ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರ ಸಹಕಾರದಲ್ಲಿ ಮಾಹಿತಿ ಪಡೆಯುತ್ತಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. 
ಕಳೆದ ಎಂಡು ತಿಂಗಳಿಂದ ಕುಮಾರಸ್ವಾಮಿ ಲೇಔಟ್ ಸಮೀಪ ಕಾನೂನು ಬಾಹಿರವಾಗಿ ನೆಲೆಸಿದ್ದ ಪಾಕಿಸ್ತಾನದ ಸಮೀರಾ ಅಲಿಯಾಸ್ ನಜ್ಮಾ, ಆಕೆಯ ಸಂಬಂಧಿಕರಾದ ಮಹಮದ್ ಖಾಸೀಫ್, ಕಿರಣ್ ಅಲಿಯಾಸ್ ಝೈನಬ್ ಹಾಗೂ ಈ ಮೂವರಿಗೆ ಸಹಕರಿಸಿದ ಕಾರಣಕ್ಕೆ ಕೇರಳ ಮೂಲದ ಮಹಮದ್ ಸಿಹಾಬ್ ನನ್ನು ಬಂಧಿಸಲಾಗಿತ್ತು. ಈ ವಿಚಾರಣೆ ವೇಳೆ ಪಾಕ್ ಪ್ರೇಮ ಕಹಾನಿ ಬೆಳಕಿಗೆ ಬಂದಿತ್ತು. ತನಿಖೆಯಲ್ಲಿ ಕೇಂದ್ರ ಗುಪ್ತಚರ, ರಾ, ರಾಷ್ಟ್ರೀಯ ತನಿಖಾ ದಳ ಮಾತ್ರವಲ್ಲದೆ ರಾಜ್ಯದ ಐಎಸ್ ಡಿ ಹಾಗೂ ಸಿಸಿಬಿ ತಂಡಗಳು ಕಾರ್ಯ ನಿರತರಾಗಿವೆ. 
ಬಂಧಿತ ಪಾಕಿಸ್ತಾನ ಪ್ರಜೆಗಳು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ. ಆದರೆ, ಬೆಂಗಳೂರಿಗೆ ಬರುವುದಕ್ಕೂ ಮುನ್ನ ಅಪರಾಧ ಕೃತ್ಯಗಳಲ್ಲಿ ಏನಾದರೂ ಭಾಗಿಯಾಗಿದ್ದರೇ ಎಂಬುದರ ಬಗ್ಗೆ ಇದೀಗ ಗುಪ್ತಚರ ಇಲಾಖೆ ಅಧಿಕಾರಿಗಳಿಂದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಬಂಧಿತರು ಕಠ್ಮಂಡುವಿನಿಂದ ಕತಾರ್ ಮೂಲಕ ಭಾರತಕ್ಕೆ ಬಂದಿದ್ದಾರೆ. ಆದರೆ, ಎಲ್ಲಿಯೂ ದೀರ್ಘಾವಧಿಗಳ ನೆಲೆಯೂರಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ತನಿಖೆಯೊಂದಿಗೆ ಈಗಾಗಲೇ ಗುಪ್ತಚರ ಇಲಾಖೆಯ ತಂಡ ಕೈಜೋಡಿಸಿದ್ದು, ಭಾರತ ತಲುಪಲು ಮತ್ತಷ್ಟು ಜನರು ಇವರಿಗೆ ಸಹಾಯ ಮಾಡಿರುವ ಶಂಕೆಗಳು ವ್ಯಕ್ತವಾಗಿದ್ದು, ಅಗತ್ಯಬಿದ್ದರೆ ಕತಾರ್ ಗೆ ಅಧಿಕಾರಿಗಳನ್ನು ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT