ರಾಜ್ಯ

ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ: ಸಚಿವ ಎ. ಮಂಜು

Shilpa D
ಮೈಸೂರು: ಇತ್ತೀಚೆಗೆ ನಿಧನರಾದ ಕೇಂದ್ರ ಪರಿಸರ ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಎ.ಮಂಜು ಹೇಳಿದ್ದಾರೆ. 
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾನೂನಿನಲ್ಲಿ ಅವರ ಪಾತ್ರ ಇರುವುದರಿಂದ ಅದರ ಶಾಪದಿಂದಾಗಿ ಅನಿಲ್ ದಾವೆ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಧರಿಸುವ ಶೂ ಕೂಡ ಲೆದರ್ ಕೈಗಾರಿಕೆಯಲ್ಲಿ ದನಗಳ ಚರ್ಮದಿಂದ ತಯಾರಿಸಿದ್ದೇ ಆಗಿದೆ, ಆದರೆ ಹಸುವಿನ ಹಾಲನ್ನು ಮಾತ್ರ ಕುಡಿಯುತ್ತಾರೆ ಎಂದು ಹೇಳಿದ್ದಾರೆ.
ಕೇಂದ್ರಸರ್ಕಾರ ಈ ಕಾನೂನು ಜಾರಿಗೆ ತರುವ ಮುನ್ನ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿಲ್ಲ. ಆದರೆ ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಒಂದು ನೀತಿ ನಿಯಮ ಜಾರಿಗೆ ತರುವ ಮುನ್ನ ಎಲ್ಲಾ ರಾಜ್ಯಗಳೊಂದಿಗೆ ಚರ್ಚಿಸುವ ಅವಶ್ಯಕತೆ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಕೇಂದ್ರ ಜಾರಿಗೆ ತಂದಿರುವ ಕಾನೂನಿನ ಬಗ್ಗೆ ತಮಗಿರುವ ಅಸಮಾಧಾನದ ಬಗ್ಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.
SCROLL FOR NEXT