ಸಚಿವ ಎ.ಮಂಜು 
ರಾಜ್ಯ

ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ: ಸಚಿವ ಎ. ಮಂಜು

ಇತ್ತೀಚೆಗೆ ನಿಧನರಾದ ಕೇಂದ್ರ ಪರಿಸರ ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಎ.ಮಂಜು...

ಮೈಸೂರು: ಇತ್ತೀಚೆಗೆ ನಿಧನರಾದ ಕೇಂದ್ರ ಪರಿಸರ ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಎ.ಮಂಜು ಹೇಳಿದ್ದಾರೆ. 
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾನೂನಿನಲ್ಲಿ ಅವರ ಪಾತ್ರ ಇರುವುದರಿಂದ ಅದರ ಶಾಪದಿಂದಾಗಿ ಅನಿಲ್ ದಾವೆ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಧರಿಸುವ ಶೂ ಕೂಡ ಲೆದರ್ ಕೈಗಾರಿಕೆಯಲ್ಲಿ ದನಗಳ ಚರ್ಮದಿಂದ ತಯಾರಿಸಿದ್ದೇ ಆಗಿದೆ, ಆದರೆ ಹಸುವಿನ ಹಾಲನ್ನು ಮಾತ್ರ ಕುಡಿಯುತ್ತಾರೆ ಎಂದು ಹೇಳಿದ್ದಾರೆ.
ಕೇಂದ್ರಸರ್ಕಾರ ಈ ಕಾನೂನು ಜಾರಿಗೆ ತರುವ ಮುನ್ನ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿಲ್ಲ. ಆದರೆ ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಒಂದು ನೀತಿ ನಿಯಮ ಜಾರಿಗೆ ತರುವ ಮುನ್ನ ಎಲ್ಲಾ ರಾಜ್ಯಗಳೊಂದಿಗೆ ಚರ್ಚಿಸುವ ಅವಶ್ಯಕತೆ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಕೇಂದ್ರ ಜಾರಿಗೆ ತಂದಿರುವ ಕಾನೂನಿನ ಬಗ್ಗೆ ತಮಗಿರುವ ಅಸಮಾಧಾನದ ಬಗ್ಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT