ಸಂಗ್ರಹ ಚಿತ್ರ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ನಿಧನರಾದ ಪಾರ್ವತಮ್ಮ ರಾಜ್ ಕಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಚಿತ್ರರಂಗದ ಏಳಿಗೆಯಲ್ಲಿ  ಪಾರ್ವತಮ್ಮ ರಾಜ್ ಕುಮಾರ್ ಪಾತ್ರ ಅಮೂಲ್ಯವಾಗಿದೆ. ಪಾರ್ವತಮ್ಮ ಅವರು ಮೂಲತಃ ನಮ್ಮ ಮೈಸೂರಿನವರು. ರಾಜ್ ಕುಮಾರ್ ಅವರ ಯಶಸ್ಸಿನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ಮಹತ್ವದ ಪಾತ್ರವಿದೆ.  ನಿರ್ಮಾಪಕಿಯಾಗಿ, ಹಂಚಿಕೆದಾರರಾಗಿ ಚಿತ್ರರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇದಕ್ಕೂ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಮೊದಲು ಪಾರ್ಥೀವ ಶರೀರದ ದರ್ಶನ ಪಡೆದು ಬಳಿಕ  ಸಿಎಂ ಸಿದ್ದರಾಮಯ್ಯ ಅವರು, ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಶಿವರಾಜ್  ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಆಂಜನೇಯ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಮತ್ತು  ಅಧಿಕಾರಿಗಾಳು ಸಾಥ್ ನೀಡಿದರು.

ಇದಕ್ಕೂ ಮೊದಲು ಗೃಹ ಸಚಿವ ಪರಮೇಶ್ವರ ಅವರೂ ಕೂಡ ಪಾರ್ವತಮ್ಮ ರಾಜ್ ಕುಮಾರ್ ಅವರ ಪಾರ್ಥೀವ ಶರೀದ ದರ್ಶನ ಪಡೆದು ಅಂತ್ಯ ಸಂಸ್ಕಾರದ ಕುರಿತು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT