ಸಂಗ್ರಹ ಚಿತ್ರ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ನಿಧನರಾದ ಪಾರ್ವತಮ್ಮ ರಾಜ್ ಕಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಚಿತ್ರರಂಗದ ಏಳಿಗೆಯಲ್ಲಿ  ಪಾರ್ವತಮ್ಮ ರಾಜ್ ಕುಮಾರ್ ಪಾತ್ರ ಅಮೂಲ್ಯವಾಗಿದೆ. ಪಾರ್ವತಮ್ಮ ಅವರು ಮೂಲತಃ ನಮ್ಮ ಮೈಸೂರಿನವರು. ರಾಜ್ ಕುಮಾರ್ ಅವರ ಯಶಸ್ಸಿನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ಮಹತ್ವದ ಪಾತ್ರವಿದೆ.  ನಿರ್ಮಾಪಕಿಯಾಗಿ, ಹಂಚಿಕೆದಾರರಾಗಿ ಚಿತ್ರರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇದಕ್ಕೂ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಮೊದಲು ಪಾರ್ಥೀವ ಶರೀರದ ದರ್ಶನ ಪಡೆದು ಬಳಿಕ  ಸಿಎಂ ಸಿದ್ದರಾಮಯ್ಯ ಅವರು, ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಶಿವರಾಜ್  ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಆಂಜನೇಯ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಮತ್ತು  ಅಧಿಕಾರಿಗಾಳು ಸಾಥ್ ನೀಡಿದರು.

ಇದಕ್ಕೂ ಮೊದಲು ಗೃಹ ಸಚಿವ ಪರಮೇಶ್ವರ ಅವರೂ ಕೂಡ ಪಾರ್ವತಮ್ಮ ರಾಜ್ ಕುಮಾರ್ ಅವರ ಪಾರ್ಥೀವ ಶರೀದ ದರ್ಶನ ಪಡೆದು ಅಂತ್ಯ ಸಂಸ್ಕಾರದ ಕುರಿತು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT