ರಾಜ್ಯ

ದತ್ತ ಪೀಠ ವಿವಾದ ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

Shilpa D
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿಯಲ್ಲಿರುವ ದತ್ತಪೀಠ ವಿವಾದ ಬಗೆಹರಿಸಲು ತ್ರಿಸದಸ್ಯರನ್ನೊಳಗೊಂಡ ಸಮಿತಿ ರಚಿಸಲು ಸಂಪುಟ ಸಭೆ ಅನುಮತಿ ನೀಡಿದೆ.
ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದೆ. ವಿವಾದದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವ ಮತ್ತಿಬ್ಬರನ್ನು ಸಮಿತಿಗೆ ನೇಮಕ ಮಾಡಲಾಗುತ್ತದೆ.
ಬಾಬಾ ಬುಡನ್ ಗಿರಿಯ ದತ್ತ ಪೀಠ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯವರ ವಾದ ವಿವಾದಗಳನ್ನು ಆಲಿಸಿ, ರಾಜ್ಯ ಸರ್ಕಾರ ಸೂಕ್ತ ತೀರ್ಮಾನಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶದಂತೆ ಸಮಿತಿ ರಚಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.
SCROLL FOR NEXT