ಟಿ.ಬಿ ಜಯಚಂದ್ರ 
ರಾಜ್ಯ

ಕಸಾಯಿಖಾನೆಗೆ ಜಾನುವಾರುಗಳ ಮಾರಾಟ ನಿಷೇಧ ನಿಯಮ ಅಸಾಂವಿಧಾನಿಕ: ಟಿ.ಬಿ ಜಯಚಂದ್ರ

ಕಸಾಯಿಖಾನೆಗೆ ಜಾನುವಾರುಗಳ ಮಾರಾಟ ನಿಷೇಧ ನಿಯಮ ಅಸಾಂವಿಧಾನಿಕ ವಾಗಿದೆ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಟಿ.ಬಿ ..

ಬೆಂಗಳೂರು:  ಕಸಾಯಿಖಾನೆಗೆ ಜಾನುವಾರುಗಳ ಮಾರಾಟ ನಿಷೇಧ ನಿಯಮ ಅಸಾಂವಿಧಾನಿಕ ವಾಗಿದೆ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹೊಸ ನಿಯಮ 1960ರ ಪ್ರಾಣಿಗಳ ಮೇಲಿನ ಹಿಂಸೆ ನಿಷೇಧ ಕಾಯ್ದೆಗೆ ವಿರೋಧವಾಗಿದೆ ಎಂದು ಹೇಳಿದ್ದಾರೆ.  
ಕಾಯ್ದೆ ಮತ್ತು ನಿಯಮಗಳು ತದ್ವಿರುದ್ಧವಾಗಿವೆ. ಕಾಯ್ದೆಯಲ್ಲಿ ಇಲ್ಲದೇ ಇರುವುದನ್ನು ಸೇರಿಸಿ ನಿಯಮ ರೂಪಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. ಆತುರದಲ್ಲಿ ರೂಪಿಸಿದ ನಿಯಮಗಳನ್ನು ಪರಿಪಾಲನೆ ಮಾಡಲು ಆಗುತ್ತದೆಯೇ ಇಲ್ಲವೇ ಎಂಬ ಬಗ್ಗೆ ಮತ್ತೊಮ್ಮೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.
1964 ರಿಂದಲೇ ಗೋಹತ್ಯೆ ನಿಷೇಧ ಕಾಯ್ದೆ ಕರ್ನಾಟಕದಲ್ಲಿ ಜಾರಿಯಲ್ಲಿದೆ. ಕೇಂದ್ರ ಸರ್ಕಾರದ ನಿಯಮ ಪಾಲನೆ ಮಾಡಿದರೆ ರಾಜ್ಯದ ಕಾಯ್ದೆ ಮೀರಿ ಕಾನೂನು ಪಾಲನೆ ಮಾಡಬೇಕಾದ ಸ್ಥಿತಿ ಬರಲಿದೆ ಎಂದು ಸಂಪುಟ ಸಭೆಯಲ್ಲಿ ವಿವರಿಸಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT