ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ 
ರಾಜ್ಯ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ: ಪರೀಕ್ಷೆ ಮುಂದೂಡಿಕೆ

ಹಲವು ವಿದ್ಯಾರ್ಥಿ ಸಂಘಟನೆಗಳ ಬೇಡಿಕೆಗಳಿಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಈ ತಿಂಗಳು...

ಬೆಂಗಳೂರು: ಹಲವು ವಿದ್ಯಾರ್ಥಿ ಸಂಘಟನೆಗಳ ಬೇಡಿಕೆಗಳಿಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಈ ತಿಂಗಳು ಆರಂಭವಾಗಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.
ಮರುಮೌಲ್ಯಮಾಪನ ಫಲಿತಾಂಶವನ್ನು ತಡವಾಗಿ ಬಿಡುಗಡೆ ಮಾಡಿದ್ದನ್ನು  ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ವಿವಿ ಈ ತೀರ್ಮಾನ ಕೈಗೊಂಡಿದೆ.
ಮರುಮೌಲ್ಯಮಾಪನ ಫಲಿತಾಂಶ ತಡವಾದದ್ದರಿಂದ ಕೆಲವು ವಿದ್ಯಾರ್ಥಿಗಳು ಮುಂದಿನ ಮರು ಮೌಲ್ಯಮಾಪನ ಶುಲ್ಕದ ಜೊತೆಗೆ ಪರೀಕ್ಷಾ ಶುಲ್ಕಗಳನ್ನು ಪಾವತಿಸಬೇಕಾಗುತ್ತಿತ್ತು.  
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಕರಿಸಿದ್ದಪ್ಪ, ಅಂತಿಮ ಬಿಇ ವರ್ಷದ ಪರೀಕ್ಷೆಗಳು ಇದೇ 5ರಂದು ಆರಂಭವಾಗಬೇಕಿದ್ದು, ಅದನ್ನು ಮುಂದೂಡಲಾಗಿದ್ದು ಇದೇ 12ರಂದು ನಡೆಯಲಿದೆ. 
ಇತರ ಕೆಳ ಹಂತದ ಸೆಮೆಸ್ಟರ್ ಪರೀಕ್ಷೆಗಳು ಜೂನ್ 23ರಂದು ಆರಂಭವಾಗಲಿದೆ. ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಜುಲೈ 31ರಂದು ಮುಗಿಯಲಿದೆ ಎಂದು ತಿಳಿಸಿದರು. 
ವಿವರವಾದ ವೇಳಾಪಟ್ಟಿ ಇದೇ 3ರಂದು ಘೋಷಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT