ನೂತನ ವಧು-ವರರು (ಚಿತ್ರ ಕೃಪೆ: ಸುವರ್ಣ ನ್ಯೂಸ್) 
ರಾಜ್ಯ

ಪ್ರೀತಿಸಿದ ಯುವತಿಯ ವರಿಸಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ!

ಹಿಂದೂ ಯುವತಿಯನ್ನು ಪ್ರೀತಿಸಿದ್ದ ಮುಸ್ಲಿಂ ಯುವಕನೋರ್ವ ಆಕೆಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಅಪರೂಪದ ಪ್ರಕರಣ ಯಲ್ಲಾಪುರದಲ್ಲಿ ನಡೆದಿದೆ.

ಯಲ್ಲಾಪುರ: ಹಿಂದೂ ಯುವತಿಯನ್ನು ಪ್ರೀತಿಸಿದ್ದ ಮುಸ್ಲಿಂ ಯುವಕನೋರ್ವ ಆಕೆಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಅಪರೂಪದ ಪ್ರಕರಣ ಯಲ್ಲಾಪುರದಲ್ಲಿ ನಡೆದಿದೆ.

ಮಾಧ್ಯಮವೊಂದು ವರದಿ ಮಾಡಿರುವಂತೆ ಯಲ್ಲಾಪುರ ಪಟ್ಟಣದ ನೂತನ್ ನಗರದ ನಿವಾಸಿ ಹಸನ್ ರಹಿಂ ಖಾನ್ ಎಂಬ ಯುವಕ ಕಾಳಮ್ಮನಗರದ ಯಶೋದಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಇವರಿಬ್ಬರು ನಾಲ್ಕು  ವರ್ಷಗಳಿಂದ ಪ್ರೀತಿಸುತ್ತಿದ್ದು, ಪ್ರೀತಿಸಿದ ಯುವತಿಯನ್ನು ಕೈ ಹಿಡಿಯಲೇಬೇಕು ಎಂದು ನಿರ್ಧರಿಸಿದ ಯುವಕ ಪೋಷಕರ ವಿರೋಧದ ನಡುವೆಯೇ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಸಾರ್ವಜನಿಕರ ಸಮುಖದಲ್ಲಿ  ವಿವಾಹವಾಗಿದ್ದಾನೆ.

ಅಲ್ಲದೆ ತನ್ನ ಹೆಸರನ್ನೂ ಕೂಡ ಆರ್ಯ ಎಂದು ಬದಲಾಯಿಸಿಕೊಂಡಿದ್ದು, ಹಿಂದೂ ಧಾರ್ಮಿಕ ಪದ್ಧತಿಯಂತೆ ಹಿಂದೂ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಇಲ್ಲಿನ ಈಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಇಬ್ಬರೂ  ಸಪ್ತಪದಿ ತುಳಿದಿದ್ದಾರೆ.  ವಿಶೇಷವೆಂದರೆ ಈ ಅಪರೂಪದ ವಿವಾಹಕ್ಕೆ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಸಾಕ್ಷಿಯಾಗಿದ್ದು, ಮದುವೆಗೆ ಆಗಮಿಸಿ ನೂತನ ವಧು-ವರರನ್ನು ಆಶೀರ್ವದಿಸಿದರು. ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿವಾಹ ‘ಲವ್ ಜಿಹಾದ್’ಗೆ ತಕ್ಕ ಉತ್ತರ. ಇಲ್ಲಿನ ಮುಸ್ಲಿಮರ ಪೂರ್ವಜರು ಹಿಂದೂಗಳೇ ಆಗಿದ್ದು, ಒತ್ತಾಯ ಪೂರ್ವಕವಾಗಿ ಮತಾಂತರವಾಗಿದ್ದಾರೆ. ಪುನಃ ಅವರನ್ನು ಹಿಂದೂ  ಧರ್ಮಕ್ಕೆ ಕರೆತರಬೇಕೆಂಬುದು ನಮ್ಮ ಆಶಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT