ನೂತನ ವಧು-ವರರು (ಚಿತ್ರ ಕೃಪೆ: ಸುವರ್ಣ ನ್ಯೂಸ್) 
ರಾಜ್ಯ

ಪ್ರೀತಿಸಿದ ಯುವತಿಯ ವರಿಸಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ!

ಹಿಂದೂ ಯುವತಿಯನ್ನು ಪ್ರೀತಿಸಿದ್ದ ಮುಸ್ಲಿಂ ಯುವಕನೋರ್ವ ಆಕೆಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಅಪರೂಪದ ಪ್ರಕರಣ ಯಲ್ಲಾಪುರದಲ್ಲಿ ನಡೆದಿದೆ.

ಯಲ್ಲಾಪುರ: ಹಿಂದೂ ಯುವತಿಯನ್ನು ಪ್ರೀತಿಸಿದ್ದ ಮುಸ್ಲಿಂ ಯುವಕನೋರ್ವ ಆಕೆಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಅಪರೂಪದ ಪ್ರಕರಣ ಯಲ್ಲಾಪುರದಲ್ಲಿ ನಡೆದಿದೆ.

ಮಾಧ್ಯಮವೊಂದು ವರದಿ ಮಾಡಿರುವಂತೆ ಯಲ್ಲಾಪುರ ಪಟ್ಟಣದ ನೂತನ್ ನಗರದ ನಿವಾಸಿ ಹಸನ್ ರಹಿಂ ಖಾನ್ ಎಂಬ ಯುವಕ ಕಾಳಮ್ಮನಗರದ ಯಶೋದಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಇವರಿಬ್ಬರು ನಾಲ್ಕು  ವರ್ಷಗಳಿಂದ ಪ್ರೀತಿಸುತ್ತಿದ್ದು, ಪ್ರೀತಿಸಿದ ಯುವತಿಯನ್ನು ಕೈ ಹಿಡಿಯಲೇಬೇಕು ಎಂದು ನಿರ್ಧರಿಸಿದ ಯುವಕ ಪೋಷಕರ ವಿರೋಧದ ನಡುವೆಯೇ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಸಾರ್ವಜನಿಕರ ಸಮುಖದಲ್ಲಿ  ವಿವಾಹವಾಗಿದ್ದಾನೆ.

ಅಲ್ಲದೆ ತನ್ನ ಹೆಸರನ್ನೂ ಕೂಡ ಆರ್ಯ ಎಂದು ಬದಲಾಯಿಸಿಕೊಂಡಿದ್ದು, ಹಿಂದೂ ಧಾರ್ಮಿಕ ಪದ್ಧತಿಯಂತೆ ಹಿಂದೂ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಇಲ್ಲಿನ ಈಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಇಬ್ಬರೂ  ಸಪ್ತಪದಿ ತುಳಿದಿದ್ದಾರೆ.  ವಿಶೇಷವೆಂದರೆ ಈ ಅಪರೂಪದ ವಿವಾಹಕ್ಕೆ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಸಾಕ್ಷಿಯಾಗಿದ್ದು, ಮದುವೆಗೆ ಆಗಮಿಸಿ ನೂತನ ವಧು-ವರರನ್ನು ಆಶೀರ್ವದಿಸಿದರು. ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿವಾಹ ‘ಲವ್ ಜಿಹಾದ್’ಗೆ ತಕ್ಕ ಉತ್ತರ. ಇಲ್ಲಿನ ಮುಸ್ಲಿಮರ ಪೂರ್ವಜರು ಹಿಂದೂಗಳೇ ಆಗಿದ್ದು, ಒತ್ತಾಯ ಪೂರ್ವಕವಾಗಿ ಮತಾಂತರವಾಗಿದ್ದಾರೆ. ಪುನಃ ಅವರನ್ನು ಹಿಂದೂ  ಧರ್ಮಕ್ಕೆ ಕರೆತರಬೇಕೆಂಬುದು ನಮ್ಮ ಆಶಯ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT