ಕಬ್ಬನ್ ಪಾರ್ಕ್ ನಲ್ಲಿ ಹೂವಿನಿಂದ ತಯಾರಿಸಿದ ವಿಮಾನ 
ರಾಜ್ಯ

ಮಕ್ಕಳ ದಿನಾಚರಣೆಗೆ ಕಬ್ಬನ್ ಪಾರ್ಕ್ ನಲ್ಲಿ ಕ್ಯಾಪ್ಸಿಕಂ ಪೊಲೀಸ್ ಠಾಣೆ!

ಗುಲಾಬಿಗಳು, ಲಿಲ್ಲಿ ಹೂಗಳು, ಆರ್ಕಿಡ್ ಗಳು, ಡೇಲಿಯಾ ಮೊದಲಾದ ಒಂದು ಲಕ್ಷಕ್ಕೂ ಅಧಿಕ ಹೂವುಗಳನ್ನು...

ಬೆಂಗಳೂರು: ಗುಲಾಬಿಗಳು, ಲಿಲ್ಲಿ ಹೂಗಳು, ಆರ್ಕಿಡ್ ಗಳು, ಡೇಲಿಯಾ ಮೊದಲಾದ ಒಂದು ಲಕ್ಷಕ್ಕೂ ಅಧಿಕ ಹೂವುಗಳನ್ನು ಸೇರಿಸಿ ಕಬ್ಬನ್ ಪಾರ್ಕ್ ನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ತಾವರೆಯ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಮಕ್ಕಳ ದಿನಾಚರಣೆ ಪ್ರಯುಕ್ತ ನವೆಂಬರ್ 11ರಿಂದ 14 ರವರಗೆ ಮೂರು ದಿನಗಳ ಕಾಲ ವಿಶೇಷ ಪುಷ್ಪ ಪ್ರದರ್ಶನ ಕೈಗೊಳ್ಳಲಾಗಿದೆ.
ಪುಷ್ಪ ಪ್ರದರ್ಶನದಲ್ಲಿ ತಾವರೆಯ ದೇವಸ್ಥಾನ ನಿರ್ಮಾಣ ಪ್ರಮುಖ ಆಕರ್ಷಣೆಯಾಗಿದೆ. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 10 ಅಡಿ ಎತ್ತರಕ್ಕೆ ನಿರ್ಮಿಸಲಾಗಿದ್ದು ಕಬ್ಬನ್ ಪಾರ್ತ್ ಬಾಂಡ್ ಸ್ಟಾಂಡ್ ನಲ್ಲಿ ಈ ಹೂವಿನ ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ. ಪುಷ್ಪ ಪ್ರದರ್ಶನಕ್ಕೆ 5ರಿಂದ 6 ಲಕ್ಷ ಹೂವುಗಳನ್ನು ಬಳಸಲಾಗಿದೆ.
ಕಬ್ಬನ್ ಪಾರ್ಕ್ ನ ಪುಷ್ಪ ಪ್ರದರ್ಶನದ ಮತ್ತೊಂದು ಪ್ರಮುಖ ಆಕರ್ಷಣೆ ಕ್ಯಾಪ್ಸಿಕಂನಿಂದ ತಯಾರಿಸಿದ ಪೊಲೀಸ್ ಠಾಣೆ. ಪೊಲೀಸರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಪುಷ್ಪದಿಂದ ತಯಾರಿಸಲ್ಪಟ್ಟ ಪೊಲೀಸ್ ಠಾಣೆಯ ಆಕರ್ಷಣೆಯಾಗಿದೆ. ಪೊಲೀಸ್ ಠಾಣೆ ನಿರ್ಮಾಣಕ್ಕೆ ಸಾವಿರಾರು ಕ್ಯಾಪ್ಸಿಕಂಗಳನ್ನು ಬಳಸಲಾಗಿದೆ.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಜನರಿಗೆ ಕಡಿಮೆ ವೆಚ್ಚದಲ್ಲಿ ತಾರಸಿ ಗಾರ್ಡನ್, ತರಕಾರಿ ಬೆಳೆಯುವ ಬಗ್ಗೆ ಹೇಳಿಕೊಡಲಿದೆ.ನಗರ ತೋಟಗಾರಿಕೆ ಬಗ್ಗೆ ಜನರಿಗೆ ಹೆಚ್ಚು ಒಲವು ತೋರುವಂತೆ ಮಾಡಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT