ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಗನ ಸಾವಿನಿಂದ ಖಿನ್ನತೆಗೊಳಗಾಗಿದ್ದ ತಂದೆ ಆತ್ಮಹತ್ಯೆ

ಮಗನ ಸಾವಿನಿಂದ ನೊಂದು ಖಿನ್ನತೆಗೊಳಗಾಗಿದ್ದ ತಂದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ....

ಬೆಂಗಳೂರು: ಮಗನ ಸಾವಿನಿಂದ ನೊಂದು ಖಿನ್ನತೆಗೊಳಗಾಗಿದ್ದ ತಂದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಎಸ್ ಆರ್ ಟಿಸಿ ಲೇಔಟ್ ನ ಮಾರುತಿ ನಗರದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಂಜುನಾಥ್(45) ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆಯಲ್ಲಿ ಪಿಯಸಿ ಓದುತ್ತಿದ್ದ ಮಂಜುನಾಥ್ ಪುತ್ರ ಶಶಿ ಎರಡು ತಿಂಗಳ ಹಿಂದೆ ಸಾವನ್ನಪ್ಪಿದ್ದ.ಸೋಮವಾರ ರಾತ್ರಿ ಮನೆಯಿಂದ ತೆರಳಿದ ಮಂಜುನಾಥ್ 1 ಗಂಟೆಯಲ್ಲಿ ವಾಪಸ್ ಬರುವುದಾಗಿ ಪತ್ನಿ ಚಂದ್ರಕಲಾಗೆ ಹೇಳಿ ಹೋಗಿದ್ದಾರೆ.
ಮಂಗಳವಾರ ರಾತ್ರಿಯಾದರೂ ಮಂಜುನಾಥ್ ವಾಪಸ್ ಬಾರದಿದ್ದಾಗ ಚಂದ್ರಕಲಾ ಪೊಲೀಸರನ್ನು ಸಂಪರ್ಕಿಸಿದ್ದಾರೆ, ಈ ವೇಳೆ ಪೊಲೀಸರು ಆಕೆಯ ಬಳಿ ಮಂಜುನಾಥ್ ಫೋಟೋ ಕೇಳಿದ್ದಾರೆ.
ಬುಧವಾರ ಬೆಳಗ್ಗೆ 9.30ರ ವೇಳೆಗೆ ಆಕೆ ಫ್ಯಾನ್ಸಿ ಸ್ಟೋರ್ ನಲ್ಲಿ ಫೋಟೋ ತೆಗೆದುಕೊಳ್ಳಲು ಹೋಗಿದ್ದಾರೆ. ಅಂಗಡಿಯ ಶಟರ್ ಒಳಗಿನಿಂದ ಲಾಕ್ ಆಗಿತ್ತು. ಜೊತೆಗೆ ಒಳಗಿನಿಂದ ವಾಸನೆ ಬರುತ್ತಿತ್ತು.
ಈ ವೇಳೆ ಸ್ಥಳಕ್ಕಾಗಮಿಸಿದ ನೆರೆಹೊರೆಯವರು, ಶಟರ್ ಒಪನ್ ಮಾಡಿದಾಗ ಮಂಜುನಾಥ್ ದೇಹ ಪತ್ತೆಯಾಗಿದೆ. ಈ ವೇಳೆ ಮಗನ ಸಾವಿನಿಂದಾಗಿ ತನ್ನ ಪತಿ ಖಿನ್ನತೆಗೊಳಗಾಗಿದ್ದರು ಎಂದು ಚಂದ್ರಕಲಾ ಪೊಲೀಸರಿಗೆ ತಿಳಿಸಿದ್ದಾರೆ. ಬೈದರಹಳ್ಳಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT