ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ತವ್ಯದ ವೇಳೆ ಪೊಲೀಸ್ ಠಾಣೆಯಲ್ಲಿಯೇ ಪೇದೆ ಸಾವು

ಹೃದಯ ಸ್ತಂಭನದಿಂದಾಗಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ...

ಚಿಕ್ಕಮಗಳೂರು: ಹೃದಯ ಸ್ತಂಭನದಿಂದಾಗಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. 
ವೈ.ಎಸ್. ಮಲ್ಲಿಕಾರ್ಜುನ (38) ಮೃತಪಟ್ಟ ಪೇದೆಯಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಅವರನ್ನು ಧರ್ಮಸ್ಥಳದಲ್ಲಿ ಕರ್ತವ್ಯ ನಿರ್ವಹಿಸುವಂತೆ ನಿಯೋಜಿಸಲಾಗಿತ್ತು. 
ಮಲ್ಲಿಕಾರ್ಜುನ ಅವರು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅವರಿಗೆ ಇದ್ದಕ್ಕಿದ್ದಂತೆ ಹೃದಯ ಸ್ತಂಭನ ಎದುರಾಗಿದೆ. ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಸಿಬ್ಬಂದಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಲ್ಲಿಕಾರ್ಜುನ ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS centenary: ಪ್ರಪ್ರಥಮ ಬಾರಿಗೆ 'ಭಾರತ ಮಾತೆ'ಯ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ, ಕೇಂದ್ರ ಸಂಪುಟ ಅನುಮೋದನೆ

Pakistan Army ವಿರುದ್ಧ ತಿರುಗಿ ಬಿದ್ದ POK ಜನತೆ, ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video

SCROLL FOR NEXT