ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರಾಜಸ್ತಾನದಲ್ಲಿ ಅಪಹರಣಕ್ಕೀಡಾದ ಅಪ್ರಾಪ್ತ ಬಾಲಕಿಯ ರಕ್ಷಣೆ

ರಾಜಸ್ತಾನದ ಹಳ್ಳಿಯೊಂದರಲ್ಲಿ ಅಪಹರಣಕ್ಕೀಡಾಗಿದ್ದ 16 ವರ್ಷದ ....

ಬೆಂಗಳೂರು: ರಾಜಸ್ತಾನದ ಹಳ್ಳಿಯೊಂದರಲ್ಲಿ ಅಪಹರಣಕ್ಕೀಡಾಗಿದ್ದ 16 ವರ್ಷದ ಬಾಲಕಿಯನ್ನು ರೈಲ್ವೆ ರಕ್ಷಣಾ ಪಡೆ ರಕ್ಷಿಸಿದೆ.
ರಾಜಸ್ತಾನದ ನಾಗೌರ್ ಜಿಲ್ಲೆಯ ಹುಡುಗಿ ಕಳೆದ ಶನಿವಾರ ತನ್ನ ತಾಯಿಗೆ ಹುಷಾರಿಲ್ಲವೆಂದು ಮೆಡಿಕಲ್ ನಿಂದ ಔಷಧ ತರಲೆಂದು ಹೋಗಿದ್ದಳು. ಮನೆಗೆ ವಾಪಸಾಗುತ್ತಿದ್ದಾಗ ಅಪರಿಚಿತರು ಅವಳ ಬಳಿ ಆಗಮಿಸಿದರು. ಏರೋಸೆಲ್ ನ್ನು ಬಾಲಕಿ ಮುಖಕ್ಕೆ ಸಿಂಪಡಿಸಿ ಪ್ರಜ್ಞೆ ತಪ್ಪುವಂತೆ ಮಾಡಿ ಅಪಹರಿಸಿದ್ದರು. ಔಷಧ ತರಲೆಂದು ಹೋದ ಬಾಲಕಿ ಮನೆಗೆ ಹಿಂತಿರುಗದಿದ್ದಾಗ ಆಕೆಯ ಮನೆಯವರು ಗಾಬರಿಗೊಳಗಾಗಿ ಪೊಲೀಸ್ ಠಾಣೆಗೆ ದೂರು ನೀಡಿದರು. ಬಾಲಕಿಯನ್ನು ಯಾರೋ ಅಪಹರಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತು.
ಕೂಡಲೇ ರಾಜಸ್ತಾನದ ಪೊಲೀಸರು ಬೆಂಗಳೂರಿನ ರೈಲ್ವೆ ರಕ್ಷಣಾ ಪಡೆಗೆ ವಿಷಯ ತಲುಪಿಸಿದರು. ಬಾಲಕಿಯ ಫೋಟೋವನ್ನು ಕೂಡ ಕಳುಹಿಸಿದರು. ನಿನ್ನೆ ಜೈಪುರದಿಂದ ರೈಲು ಅಪರಾಹ್ನ 3 ಗಂಟೆಗೆ ಬೆಂಗಳೂರಿಗೆ ತಲುಪಿತು. ರೈಲ್ವೆ ರಕ್ಷಣಾ ಪಡೆ ಪೊಲೀಸರು ಬಾಲಕಿಯನ್ನು ಹುಡುಕಿದಾಗ ಶೌಚಾಲಯದಲ್ಲಿ ಪತ್ತೆಯಾದಳು. ಬಾಯಿಗೆ ಬಟ್ಟೆ ಕಟ್ಟೆ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿಹಾಕಿದ್ದರು. ಅಪಹರಿಸಿದವರು ರೈಲಿನಲ್ಲಿ ಸಿಕ್ಕಿರಲಿಲ್ಲ. ಬಾಲಕಿಯ ಪೋಷಕರಿಗೆ ಪೊಲೀಸರು ಮಾಹಿತಿ ತಲುಪಿಸಿದರು. ಬೆಂಗಳೂರಿಗೆ ಆಗಮಿಸಿದ ಪೋಷಕರಿಗೆ ಬಾಲಕಿಯನ್ನು ಹಸ್ತಾಂತರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT