ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ನವ ವಿವಾಹಿತೆ ಶವವಾಗಿ ಪತ್ತೆ, ಸೊಸೆ ಸಾವಿನಿಂದ ಮನನೊಂದು ಮಾವ ಆತ್ಮಹತ್ಯೆ

ಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ನವವಿವಾಹಿತೆ ಶವವಾಗಿ ಪತ್ತೆಯಾಗಿದ್ದಾಳೆ. ಇದೇ ವೇಳೆ ಸೊಸೆಯ ಸಾವಿನ ಸುದ್ದಿ ಕೇಳಿದ ಮಾವ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ನವವಿವಾಹಿತೆ ಶವವಾಗಿ ಪತ್ತೆಯಾಗಿದ್ದಾಳೆ. ಇದೇ ವೇಳೆ ಸೊಸೆಯ ಸಾವಿನ ಸುದ್ದಿ ಕೇಳಿದ ಮಾವ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಮೈಸೂರಿನಲ್ಲಿ ನಡೆದ ಘಟನೆಯಲ್ಲಿ ರುಕ್ಮಿಣಿ (24 ) ಸಾವನ್ನಪ್ಪಿದ ನತದೃಷ್ಟೆಯಾಗಿದ್ದು ತಮ್ಮ ಸೊಸೆಯ ಸಾವಿನಿಂದ ನೊಂದ ಮಾವ ರಮೇಶ್ (50) ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ತಿಂಗಳ ಹಿಂದೆ ಶಾದಮಹಳ್ಳಿಯ ಪುನೀತ್‍ ನನ್ನು ವಿವಾಹವಾಗಿದ್ದ ರುಕ್ಮಿಣಿ . ಅ.27ರಂದು ಪತಿಯೊಡನೆ ಜಗಳ ಮಾಡಿಕೊಂಡು  ಮನೆ ತೊರೆದು ಹೋಗಿದ್ದಳು. ಮೈಸೂರು ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯ ಗೊರೂರಿನ ವರುಣಾ ನಾಲೆಯಲ್ಲಿ ಇಂದು ರುಕ್ಮಿಣಿ ಮೃತದೇಹ ಪತ್ತೆಯಾಗಿತ್ತು.
ಮಗ ಹಾಗೂ ಸೊಸೆ ನಡುವಿನ ಭಿನ್ನಾಭಿಪ್ರಾಯದಿಂದ ನೊಂದಿದ್ದ ಮಾವ ರಮೇಶ್ ಇದೀಗ ಸೊಸೆ  ಸಾವಿನಿಂದ ನೊಂದು  ಶ್ರೀರಂಗಪಟ್ಟಣದ ಪಾಲಹಳ್ಳಿಯ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT