ಬಿಜೆಪಿ ಪರಿವರ್ತನಾ ರ್ಯಾಲಿ ವೇಳೆ ಯಾತ್ರಾ ವಾಹನದ ಮೇಲೆ ತೆಂಗಿನ ಕಾಯಿ ತೂರಾಟ 
ರಾಜ್ಯ

ಬಿಜೆಪಿ ಕಾರ್ಯಕರ್ತರಿಂದ 'ಪರಿವರ್ತನಾ ರ್ಯಾಲಿ' ಯಾತ್ರಾ ವಾಹನದ ಮೇಲೆ ತೆಂಗಿನಕಾಯಿ ತೂರಾಟ

ಪರಿವರ್ತನಾ ರ್ಯಾಲಿ ವೇಳೆ ಬಿಜೆಪಿಯ ಮತ್ತೊಂದು ಬಣದ ಕಾರ್ಯಕರ್ತರು ಯಾತ್ರಾ ವಾಹನದ ಮೇಲೆ ತೆಂಗಿನ ಕಾಯಿ ತೂರಾಟ ನಡೆಸಿದ ಘಟನೆ ತುರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ಶುಕ್ರವಾರ ನಡೆದಿದೆ...

ತುಮಕೂರು: ಪರಿವರ್ತನಾ ರ್ಯಾಲಿ ವೇಳೆ ಬಿಜೆಪಿಯ ಮತ್ತೊಂದು ಬಣದ ಕಾರ್ಯಕರ್ತರು ಯಾತ್ರಾ ವಾಹನದ ಮೇಲೆ ತೆಂಗಿನ ಕಾಯಿ ತೂರಾಟ ನಡೆಸಿದ ಘಟನೆ ತುರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ಶುಕ್ರವಾರ ನಡೆದಿದೆ. 

ಬಿಜೆಪಿಯ ಮತ್ತೊಂದು ಬಣ ಬಾಣಸಂದ್ರದಲ್ಲಿ ತಮ್ಮ ಕಾರ್ಯಕರ್ತರನ್ನು ಸಂಘಟಿಸಿ ಪರಿವರ್ತನಾ ರ್ಯಾಲಿ ಸ್ವಾಗತಕ್ಕೆ ಸಿದ್ಧತೆಗಳನ್ನು ನಡೆಸಿತ್ತು. ಇದರಂತೆ ಸಾರ್ವಜನಿಕ ಸಮಾರಂಭಕ್ಕೆ ವೇದಿಕೆಯನ್ನೂ ಹಾಕಿತ್ತು. ಆದರೆ, ಅದೇ ಮಾರ್ಗವಾಗಿ ಚಿಕ್ಕನಾಯಕನಹಳ್ಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, ಬಾಣಸಂದ್ರದಲ್ಲಿ ಸಭೆಗೆ ನಿಲ್ಲದ ಕಾರಣ ಸ್ಥಳದಲ್ಲಿ ಕೆಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿತ್ತು. 

ಕೆಲ ಬಿಜೆಪಿ ಕಾರ್ಯಕರ್ತರು ಪರಿವರ್ತನಾ ರ್ಯಾಲಿ ವಾಹನಕ್ಕೆ ತೆಂಗಿನ ಕಾಯಿ ತೂರಾಟ ನಡೆಸಿದ್ದರು. ಇದರ ಪರಿಣಾಮ ರಥ ಮುಂಭಾಗದ ಗಾಜು ಛಿದ್ರಗೊಂಡಿತು. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT