ಕೂಡಲ ಸಂಗಮ ಪಂಚಮ ಸಾಲಿ ಪೀಠದ ಸ್ವಾಮೀಜಿ ಬಸವಜಯ ಮೃತ್ಯುಂಜಯ ಸ್ವಾಮೀಜಿ 
ರಾಜ್ಯ

ಪ್ರತ್ಯೇಕ ಲಿಂಗಾಯತ ಧರ್ಮ: ಬಸವ ಜಯ ಮೃತ್ಯಂಜಯ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ಕೂಗು ಪ್ರಬಲಗೊಳ್ಳುತ್ತಿದ್ದು, ಈ ನಡುವೆ ಕೂಡಲ ಸಂಗಮ ಪಂಚಮ ಸಾಲಿ ಪೀಠದ ಸ್ವಾಮೀಜಿಯವರು ವೀರಶೈವ ಸಮುದಾಯ ಕುರಿತಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ...

ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ಕೂಗು ಪ್ರಬಲಗೊಳ್ಳುತ್ತಿದ್ದು, ಈ ನಡುವೆ ಕೂಡಲ ಸಂಗಮ ಪಂಚಮ ಸಾಲಿ ಪೀಠದ ಸ್ವಾಮೀಜಿಯವರು ವೀರಶೈವ ಸಮುದಾಯ ಕುರಿತಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. 
ಹುಬ್ಬಳ್ಳಯ ನೆಹರು ಮೈದಾನದಲ್ಲಿ ನಿನ್ನೆ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ವೀರಶೈವ ಸಮುದಾಯವನ್ನು ಬಹಿರಂಗವಾಗಿ ನಿಂದಿಸಿದರು. 
ವೀರಶೈವ ಸಮುದಾಯದವರು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಲಿಂಗಾಯತ ಆಗ್ರಹಗಳಿಗೆ ಈಡೇರದಂತೆ ಮಾಡುತ್ತಿದ್ದಾರೆ. ಲಿಂಗಾಯತರು ಹಿಂದೂಗಳಲ್ಲ. ಲಿಂಗಾಯತ ಎನ್ನುವುದು ಪ್ರತ್ಯೇಕ ಧರ್ಮ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಲಿಂಗಾಯತವನ್ನು ಹಿಂದೂ ಧರ್ಮವೆಂದು ಬಿಂಬಿಸುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ. 
ಬಳಿಕ ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರು, ಬಾಲೆಹೊಸೂರು ಮಠದ ಸ್ವಾಮೀಜಿ ದಿಂಗಲೇಶ್ವರ ಸ್ವಾಮೀಜಿಗಳ ವಿರುದ್ಧ ಕಿಡಿಕಾರಿದರು. 
ಕೆಲ ದಿನಗಳ ಹಿಂದಷ್ಟೇ ದಿಂಗಲೇಶ್ವರ ಸ್ವಾಮೀಜಿಗಳು ಲಿಂಗಾಯತರು ಹಾಗೂ ವೀರಶೈವರು ಇಬ್ಬರೂ ಒಂದೇ ಎಂದು ಹೇಳಿದ್ದರು. 
ಹೇಳಿಕೆಗೆ ತೀವ್ರವಾಗಿ ಕಿಡಿಕಾರಿರುವ ಬಸವರಾಜ ಹೊರಟ್ಟಿಯವರು, ದಿಂಗಲೇಶ್ವರ ಸ್ವಾಮೀಜಿ ಯಾರು ಎಂಬುದು ನಮಗೆ ಗೊತ್ತಿದೆ. ಈ ಹಿಂದೆ ಅವರು ಬಡ್ಡಿ ವ್ಯವಹಾರಗಳನ್ನು ಮಾಡುತ್ತಿದ್ದರು. ಬಳಿಕ ಶ್ರೀಗಳಾಗಿದ್ದರು. ಅಲ್ಲದೆ, ಮೂರುಸಾವಿರ ಮಠದ ಮಠಾಧೀಶರಾಗಲು ಕಾನೂನುಬಾಹಿರ ಹಾದಿಗಳನ್ನು ಬಳಸಿದ್ದರು ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT