ಕೂಡಲ ಸಂಗಮ ಪಂಚಮ ಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿ 
ರಾಜ್ಯ

ವೀರಶೈವರ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ವೀರಶೈವ ಸಮುದಾಯ ಕುರಿತಂತೆ ನಾನು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೂಡಲ ಸಂಗಮ ಪಂಚಮ ಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿಗಳು ಹೇಳಿದ್ದಾರೆ...

ಹುಬ್ಬಳ್ಳಿ: ವೀರಶೈವ ಸಮುದಾಯ ಕುರಿತಂತೆ ನಾನು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೂಡಲ ಸಂಗಮ ಪಂಚಮ ಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿಗಳು ಹೇಳಿದ್ದಾರೆ. 
ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ವೀರಶೈವರ ಕುರಿತಂತೆ ನಾನು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾರ ಮನನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯ ಹಾಗೂ ಭಾಷಣವನ್ನು ಬೇರೆಯದೇ ರೀತಿಯಲ್ಲಿ ಬಿಂಬಿಸಲಾಗಿದೆ. ಲಿಂಗಾಯತರಿಗೆ ಒಬ್ಬರು ಗುರುಗಳಿದ್ದರೆ, ವೀರಶೈವರಿಗೆ ಐವರು ಗುರುಗಳಿರುತ್ತಾರೆಂಬ ಅರ್ಥದಲ್ಲಿ ನಾನು ಹೇಳಿಕೆಯನ್ನು ನೀಡಿದ್ದೆ ಎಂದು ಹೇಳಿದ್ದಾರೆ. 
ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ದೊರಕುವುದಕ್ಕೆ ವೀರಶೈವರು ಅಡ್ಡಿಪಡಿಸುತ್ತಿದ್ದಾರೆ. ಲಿಂಗಾಯತರು ಹಿಂದೂಗಳಲ್ಲ. ಲಿಂಗಾಯತ ಎನ್ನುವುದು ಪ್ರತ್ಯೇಕ ಧರ್ಮ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಲಿಂಗಾಯತರು ಹಿಂದೂ ಧರ್ಮದ ಭಾಗವೆಂದು ಬಿಂಬಿಸುತ್ತಿದ್ದಾರೆ. ಇದು ಸರಿಯಲ್ಲ ಎಂದು ತಿಳಿಸಿದ್ದಾರೆ. 
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಿನ್ನೆ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ವೀರಶೈವ ಸಮುದಾಯ ಕುರಿತಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಗೆ ವೀರಶೈವ ಸಮುದಾಯದಿಂದ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT