ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ರೂ.50 ಸಾವಿರ ವರೆಗಿನ ನೇಕಾರರ ಸಾಲ ಮನ್ನಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ಸಹಕಾರ ಸಂಘಗಳಲ್ಲಿ ನೇಕಾರಿಕೆಗಾಗಿ ಪಡೆದ ನೇಕಾರರ ರೂ.50 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ...

ಬೆಂಗಳೂರು: ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ಸಹಕಾರ ಸಂಘಗಳಲ್ಲಿ ನೇಕಾರಿಕೆಗಾಗಿ ಪಡೆದ ನೇಕಾರರ ರೂ.50 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಣೆ ಮಾಡಿದ್ದಾರೆ. 
ಜಿಲ್ಲಾ ಆಡಳಿತ ಮಂಡಳಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಮಂಗಳವಾರ ರಾತ್ರಿ ನಿರ್ಧಾರ ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ನೇಕಾರರ ಸಾಲವನ್ನು ಮಾಡಲಾಗಿದೆ. ಸರ್ಕಾರದ ಈ ನಿರ್ಧಾರದಿಂದ 9,000 ನೇಕಾರರಿಗೆ ಲಾಭವಾಗಲಿದೆ. ಈ ಉದ್ದೇಶಕ್ಕೆ ಒಟ್ಟಾರೆ ರೂ.52 ಕೋಟಿ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 
ರೈತರ ಸಾಲಮನ್ನಾಗಾಗಿ ಈ ವರೆಗೂ ಸರ್ಕಾರ ರೂ.1,064 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ನೀಡಿರುವ ಮಾಹಿತಿಯಂತೆ, ರಾಜ್ಯ ಸರ್ಕಾರ ಸಾಲಮನ್ನಾ ಕುರಿತಂತೆ ತೆಗೆದುಕೊಂಡಿರುವ ನಿರ್ಧಾರದಿಂದ 20 ಜಿಲ್ಲೆಗಳ 3,27,018 ರೈತರಿಗೆ ಲಾಭವಾಗಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯ 28,296 ರೈತರಿಗೆ ಲಾಭವಾಗಿದೆ. ಕಲಬುರ್ಗಿಯಲ್ಲಿ 27,867 ರೈತರಿಗೆ ಅನುಕೂಲವಾಗಿದೆ. ಕೊಡಗು ಜಿಲ್ಲೆಯಲ್ಲಿ 510 ರೈತರಿಗೆ ಲಾಭವಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT