ಸಾಂದರ್ಭಿಕ ಚಿತ್ರ 
ರಾಜ್ಯ

ಒಂಟಿ ಮಹಿಳೆ ಕೊಲೆ ಪ್ರಕರಣ: ದಂಡುಪಾಳ್ಯ ಹಂತಕರಿಗೆ ಜೀವನ ಪರ್ಯಂತ ಶಿಕ್ಷೆ

ಬೆಂಗಳೂರಿನ ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ನಿವಾಸಿ ಗೀತಾ ಎಂಬುವರನ್ನು ಹತ್ಯೆಗೈದು ಸುಲಿಗೆ ಮಾಡಿದ್ದ ಪ್ರಕರಣಕ್ಕೆ....

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ನಿವಾಸಿ ಗೀತಾ ಎಂಬುವರನ್ನು ಹತ್ಯೆಗೈದು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡುಪಾಳ್ಯ ಗ್ಯಾಂಗ್‌ನ ಐವರಿಗೆ ಜೀವನ ಪರ್ಯಂತ ಶಿಕ್ಷೆ ಹಾಗೂ ತಲಾ ಐದು ಸಾವಿರ ರುಪಾಯಿ ದಂಡ ವಿಧಿಸಿ ವಿಶೇಷ ಕೋರ್ಟ್ ಗುರುವಾರ ತೀರ್ಪು ನೀಡಿದೆ.
ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವನಗೌಡ ಅವರು, ಐವರು ಅಪರಾಧಿಗಳಿಗೆ ಜೀವನ ಪರ್ಯಂತ ಶಿಕ್ಷೆ ವಿಧಿಸಿದ್ದಾರೆ.
ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ದಂಡುಪಾಳ್ಯ ಗ್ಯಾಂಗ್‌ನ ದೊಡ್ಡ ಹನುಮ, ಲಕ್ಷ್ಮೀ, ಮುನಿಕೃಷ್ಣ, ನಲ್ಲತಿಮ್ಮ, ವೆಂಕಟೇಶ್ ದೋಷಿಗಳಾಗಿದ್ದು, ಎಲ್ಲಾ ಅಪರಾಧಿಗಳಿಗೂ ಜೀವನ ಪರ್ಯಂತ ಶಿಕ್ಷೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. 
2000ನೇ ಇಸವಿಯಲ್ಲಿ ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯ ನಿವಾಸಿ ಗೀತಾ ಅವರನ್ನು ಐವರು ಸೇರಿ ಕೊಲೆ ಮಾಡಿದ್ದರು. ನಂತರ ಮನೆಯಲ್ಲಿದ್ದ ಸೀರೆ, ಬೆಲೆಬಾಳುವ ವಸ್ತುಗಳನ್ನು ದೋಚಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT