ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಸುಕಿನ ವೇಳೆ ಅಪಘಾತದಲ್ಲಿ ವ್ಯಕ್ತಿ ಸಾವು, ಶವದ ಮೇಲೇ ಹರಿದು ಹೋದ ನೂರಾರು ವಾಹನಗಳು!

ಅಪರಿಚಿತ ವ್ಯಕ್ತಿಯ ಶವದ ಮೇಲೆ 150 ಹೆಚ್ಚು ವಾಹನಗಳು ಸಂಚರಿಸಿದ ಭೀಕರ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.

ಬೆಂಗಳೂರು: ಅಪರಿಚಿತ ವ್ಯಕ್ತಿಯ ಶವದ ಮೇಲೆ 150 ಹೆಚ್ಚು ವಾಹನಗಳು ಸಂಚರಿಸಿದ ಭೀಕರ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.
ಮಡಿವಾಳ ಬಳಿ ಇರುವ ಬಿಎಟಿಪಿಎಲ್ ಎಲಿವೇಟೆಡ್ ಫ್ಲೈಓವರ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರಿಗೆ ಇಂದು ನಸುಕಿನ ಜಾವ 3 ಗಂಟೆಗೆ ವಾಹನವೊಂದು ಡಿಕ್ಕಿ ಹೊಡೆದಿತ್ತು.. ಆ ಸಂದರ್ಭದಲ್ಲಿ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆದರೆ ಈ ಅಪಘಾತವಾಗಿರುವ ವಿಚಾರ ಯಾರಿಗೂ ತಿಳಿಯದ ಕಾರಣದಿಂದ ಆ ಮಾರ್ಗದಲ್ಲಿ ಬರುವ ವಾಹನಗಳೆಲ್ಲವೂ ಶವದ ಮೇಲೆಯೇ ಹರಿದು ಹೋಗಿದೆ. ಕೆಲ ಗಂಟೆಗಳ ನಂತರ ಸಂಚಾರಿ ಪೋಲೀಸರು ಈ ವಿಷಯವನ್ನು ಗಮನಿಸಿದ್ದಾರೆ. ಆದರೆ ಅಷ್ಟರಲ್ಲೇ ವ್ಯಕ್ತಿಯ ದೇಹದ ಮೇಲೆ 150 ಕ್ಕೂ ಹೆಚ್ಚು ವಾಹನಗಳು ಹರಿದ ಪರಿಣಾಮ ಗುರುತು ಸಹ ಸಿಗದಂತಾಗಿತ್ತು.
ಆಂಬುಲೆನ್ಸ್‍ಗೆ ಕರೆ ಮಾಡಿದ ಪೋಲೀಸರು ಶವವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಡಿವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT