ಸಾಂದರ್ಭಿಕ ಚಿತ್ರ 
ರಾಜ್ಯ

ಫೆಬ್ರವರಿಯಿಂದ ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ರೈಲು ಸಂಚಾರ

2018 ರ ಫೆಬ್ರವರಿಯಿಂದ ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ಪ್ರಯಾಣಿಕ ರೈಲು ಸಂಚಾರ ಆರಂಭವಾಗಲಿದೆ. ಹಲವು ದಿನಗಳಿಂದ ...

ಬೆಂಗಳೂರು: 2018 ರ ಫೆಬ್ರವರಿಯಿಂದ ಶ್ರವಣಬೆಳಗೊಳ ಮೂಲಕ ಬೆಂಗಳೂರು-ಮಂಗಳೂರು ಪ್ರಯಾಣಿಕ ರೈಲು ಸಂಚಾರ ಆರಂಭವಾಗಲಿದೆ. ಹಲವು ದಿನಗಳಿಂದ ಪ್ರಯಾಣಿಕರ ಒತ್ತಾಯದ ಮೇರೆಗೆ ಶ್ರವಣ ಬೆಳಗೊಳ ಮೂಲಕ ರೈಲು ಪ್ರಯಾಣಕ್ಕೆ ಅಂತಿಮವಾಗಿ ನೈರುತ್ಯ ರೈಲ್ವೆ ಇಲಾಖೆ ಅನುಮತಿ ನೀಡಿದೆ.
ಇತ್ತೀಚೆಗೆ ಶ್ರವಣ ಬೆಳಗೊಳ ರೈಲು ಮಾರ್ಗ ಉದ್ಘಾಟನೆಯಾಗಿದ್ದು, ಈ ಮಾರ್ಗದ ಮೂಲಕ ಸಂಚರಿಸಿದರೇ ಬೆಂಗಳೂರು-ಮಂಗಳೂರು ನಗರದ ಪ್ರಯಾಣದ ಅವಧಿ ಸುಮಾರು 85 ರಿಂದ 45 ನಿಮಿಷಕ್ಕೆ ಇಳಿಯಲಿದೆ.
21 ವರ್ಷಗಳ ಪ್ರಸ್ತಾವನೆ ನಂತರ ಬೆಂಗಳೂರು-ಹಾಸನ ಮತ್ತು ನೆಲಮಂಗಲ-ಶ್ರವಣಬೆಳಗೊಳ ರೈಲು ಮಾರ್ಗ ಮಾರ್ಚ್ 26 ರಂದು ಆರಂಭಗೊಂಡಿತು. ವಾರದಲ್ಲಿ ನಾಲ್ಕು ಬಾರಿ  ಹೊಸ ಮಾರ್ಗದಲ್ಲಿ ರೈಲು ಸಂಚರಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಸದ್ಯ ಬೆಂಗಳೂರು-ಮಂಗಳೂರು ರೈಲು ಮೈಸೂರು ಮಾರ್ಗದ ಮೂಲಕ ಸಂಚರಿಸುತ್ತಿತ್ತು. 
ಫೆಬ್ರವರಿ 10ರಿಂದ ಈ ಮಾರ್ಗದಲ್ಲಿ ಸಂಚಾರ ಪ್ರಾರಂಭಗೊಳ್ಳಲಿದೆ.  ವಾರದ ಪ್ರತಿ ಬುಧವಾರ ಗುರುವಾರ ಮತ್ತು ಶುಕ್ರವಾರ ಹಾಗೂ ಶನಿವಾರ  ಸಂಜೆ 7.15ಕ್ಕೆ ಬೆಂಗಳೂರಿನಿಂದ ಹೊರಡಲಿರುವ ರೈಲು, ಮರುದಿನ ಬೆಳಗ್ಗೆ 6.20 ಕ್ಕೆ ಮಂಗಳೂರಿಗೆ ತಲುಪಲಿದೆ, 
ಯಶವಂತಪುರ, ಕುಣಿಗಲ್,  ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ ದಲ್ಲಿ ರೈಲು ಸ್ಟಾಪ್ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

Mark ಚಿತ್ರದ 'ಸೈಕೋ ಸೈತಾನ್' ಚಿತ್ರದ ಹಾಡು ಸಖತ್ ಟ್ರೋಲ್; Darshan ಫ್ಯಾನ್ಸ್ ಟಾಂಗ್, Youtube ವಿಡಿಯೋ ಡಿಲೀಟ್!

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

SCROLL FOR NEXT