ಹೈಕೋರ್ಟ್ 
ರಾಜ್ಯ

ಬೆಂಗಳೂರನ್ನು ದೆಹಲಿಯಂತಾಗಲು ಬಿಡಬೇಡಿ: ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ

ನಗರದ ವಾರ್ಡ್ ಮಿತಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸ್ಥಳ ಸಿಗುತ್ತದೆ, ಆದರೆ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಬಿಬಿಎಂಪಿಗೆ ಜಾಗ ...

ಬೆಂಗಳೂರು: ನಗರದ ವಾರ್ಡ್ ಮಿತಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸ್ಥಳ ಸಿಗುತ್ತದೆ, ಆದರೆ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಬಿಬಿಎಂಪಿಗೆ ಜಾಗ ಸಿಗುವುದಿಲ್ಲವೇ ಎಂದು ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಪ್ರಶ್ನಿಸಿದೆ.
ಘನ ತ್ಯಾಜ್ಯಾ ನಿರ್ವಹಣೆಗೆ ಸಂಬಂಧಿಸಿದಂತೆ ನಾಗರಿಕರ ಸಮೂಹವೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಬಿ.ಎಸ್ ಪಾಟೀಲ್ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ, ವಾರ್ಡ್ ಮಟ್ಟದಲ್ಲಿ ತ್ಯಾಜ್ಯವನ್ನು ಸಂಸ್ಕರಿಸುವ ಮೈಕ್ರೋ-ಲೆವೆಲ್ ಕ್ರಿಯಾ ಯೋಜನೆ ಸಲ್ಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿದೆ.
ಬೆಂಗಳೂರು ದೆಹಲಿಯಂತಾಗುವಂತೆ ಬಿಡಬೇಡಿ,  ನಮ್ಮ ಮುಂದಿನ ಪೀಳಿಗೆ ಆರೋಗ್ಯಯುತವಾದ ಜೀವನ ನಡೆಸಬೇಕು, ವಾರ್ಡ್ ಗಳೊಳಗೆ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಿ, ಇಲ್ಲದಿದ್ದರೇ ಹಲವು ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಬೆಂಗಳೂರಿನ ಹೊಂಡಗಳಲ್ಲಿ ಕಸ ಸುರಿಯುವ ಮುನ್ನ ಸ್ಥಳೀಯ ಜನರ ಆರೋಗ್ಯದ ಬಗ್ಗೆ ಗಮನ ಹರಿಸಿ ಎಂದು ಹೇಳಿದೆ.
ಹಲವು ಯೋಜನೆಗಳಿಗೆ ಹಣ ವ್ಯಯಿಸುತ್ತೀರಿ, ಆದರೆ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಮಾತ್ರ ಏಕಿಲ್ಲ, ಇದು ದೇಶದ ಮುಂದಿನ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಭಾಗೀಯ ಪೀಠ ತಿಳಿಸಿದೆ.
ನ್ಯಾಯಗ್ರಾಮದಲ್ಲಿರುವ ನಮ್ಮ ನಿವಾಸಕ್ಕೆ ತೆರಳುವ ಮಾರ್ಗ ಮಧ್ಯೆ ಹೆಬ್ಬಾಳ ಸಮೀಪ ಗಬ್ಬು ನಾರುತ್ತಿರುವುದು ನಮ್ಮ ಅನುಭವಕ್ಕೆ ಬಂದಿದೆ, ನಿಮ್ಮ ಕ್ರಮ ಸಾಂಪ್ರಾದಾಯಿಕವಾಗಿದ್ದು, ತೀರಾ ನಿಧಾನವಾಗಿದೆ, ನಗರದಲ್ಲಿ ಕಸದ ಸಮಸ್ಯೆ ಬಗೆಹರಿಸಲು ನೀವು ಯಾವುದೇ ಹೊಸ ತಂತ್ರಜ್ಞಾನ ಮತ್ತು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಹೇಳಿದೆ, ಕೂಡಲೇ ಉತ್ತಮ ಕ್ರಮ ಕೈಗೊಂಡು ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT