ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸಂಸ್ಕರಿಸಿದ ನೀರನ್ನೇಕೆ ತಮಿಳುನಾಡಿಗೆ ಬಿಡಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ

ತಮಿಳುನಾಡಿಗೆ ಹರಿದುಹೋಗುತ್ತಿರುವ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮೂಲಕ ಹರಿಸಿ ಸದ್ಬಳಕೆ ಮಾಡಿಕೊಳ್ಳುತ್ತಿರುವ ಯೋಜನೆಯನ್ನು ವಿರೋಧಿಸುವವರು...

ಬೆಂಗಳೂರು: ತಮಿಳುನಾಡಿಗೆ ಹರಿದುಹೋಗುತ್ತಿರುವ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮೂಲಕ ಹರಿಸಿ ಸದ್ಬಳಕೆ ಮಾಡಿಕೊಳ್ಳುತ್ತಿರುವ ಯೋಜನೆಯನ್ನು ವಿರೋಧಿಸುವವರು ಮೂರ್ಖರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 
ಬೆಳ್ಳಂದೂರು ಅಮಾನಿಕರೆಯಲ್ಲಿ ನಿನ್ನೆ ವಿವಿಧ 4 ಘಟಕಗಳ 136 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದ್ದು, ದನಕರುಗಳಿಗೆ ನೀರು ಮತ್ತು ಕೃಷಿಗೆ ಸಹಕಾರಿಯಾಗಲಿದೆ. ಬೆಂಗಳೂರಿನ ಕೆರೆಗಳಲ್ಲಿ ಉಂಟಾಗುತ್ತಿರುವ ನೊರೆ ಕೂಡ ಕಡಿಮೆಯಾಗಿಲದೆ. ಇಂತಹ ಯೋಜನೆ ಬಗ್ಗೆ ಮಾಹಿತಿ ತಿಳಿಯದೆಯೇ ಕೆಲವರು ಮಾತನಾಡುತ್ತಿದ್ದಾರೆ. ಮತ್ತೆ ಕೆಲವರು ತಿಳಿಸಿದ್ದರೂ ವಿರೋಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 
ನೀರಿನ ಸಂಸ್ಕರಣೆಯಿಂದ ವರ್ತೂರು, ಬೆಳ್ಳಂದೂರು ಕೆರೆಗಳಲ್ಲಿ ನೊರೆ ಸಮಸ್ಯೆ ಬಗೆಹರಿಯುತ್ತದೆ. ಇಲ್ಲಿನ ತ್ಯಾಜ್ಯ ನೀರು ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದೆ. ಅದನ್ನು ಸಂಸ್ಕರಿಸಿ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಬೇಕಿದೆ. ತ್ಯಾಜ್ಯ ನೀರನ್ನು ಕೋಲಾರಕ್ಕೆ ಕೊಡುತ್ತಾರೆಂದು ಕೆಲ ಮೂರ್ಖರು ಆರೋಪಿಸುತ್ತಿದ್ದಾರೆ, ಇಲ್ಲಿನ ತ್ಯಾಜ್ಯ ನೀರು ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದೆ. ಸಂಸ್ಕರಿಸಿದ ನೀರನ್ನೇಕೆ ನಾವು ತಮಿಳುನಾಡಿಗೆ ಕೊಡಬೇಕೆಂದು ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT