ಸಾಂದರ್ಭಿಕ ಚಿತ್ರ 
ರಾಜ್ಯ

ಉಸಿರಾಟದ ಸಮಸ್ಯೆಯಿರುವವರಿಗೆ ಬೆಂಗಳೂರು ಸಿಟಿ ಯೋಗ್ಯವಲ್ಲ: ವೈದ್ಯರು

ಉದ್ಯಾನ ನಗರಿ ಬೆಂಗಳೂರಿನ ವಾಯುಮಾಲಿನ್ಯ ಮಟ್ಟ ದೆಹಲಿಯಷ್ಟಾಗದಿದ್ದರೂ ಕೂಡ ಉಸಿರಾಟದ....

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ವಾಯುಮಾಲಿನ್ಯ ಮಟ್ಟ ದೆಹಲಿಯಷ್ಟಾಗದಿದ್ದರೂ ಕೂಡ ಉಸಿರಾಟದ ಶ್ವಾಸಕೋಶದ ತೊಂದರೆಯಿರುವವರಿಗೆ ಬೆಂಗಳೂರು ನಗರ ಉತ್ತಮವಲ್ಲ ಎಂದು ವೈದ್ಯರು ಅಭಿಪ್ರಾಯಪಡುತ್ತಾರೆ. 
ರಾಜೀವ್ ಗಾಂಧಿ ಹೃದ್ರೋಗ ಕಾಯಿಲೆ ಸಂಸ್ಥೆ ಮತ್ತು ಎಸ್ ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಶಶಿಧರ್ ಬುಗ್ಗಿ, ಬೆಂಗಳೂರಿನಲ್ಲಿ ವಾಯುಮಾಲಿನ್ಯಕಾರಕ ಕಾಯಿಲೆಗಳನ್ನು ಹೊಂದಿರುವವರ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂದು ಹೇಳುತ್ತಾರೆ.
ದೆಹಲಿಗೆ ಹೋಲಿಸಿದರೆ ಬೆಂಗಳೂರಿನ ಮಾಲಿನ್ಯ ಮಟ್ಟ ಕಡಿಮೆ. ಇಲ್ಲಿ ತೇವಾಂಶವು ಪ್ರಮುಖ ಪಾತ್ರ ವಹಿಸುತ್ತದೆ. ಇವು ಉಸಿರಾಟದ ತೊಂದರೆಯೊಂದಿಗೆ ಹಲವು ರೋಗಗಳಿಗೂ ಕಾರಣವಾಗುತ್ತದೆ. ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ, ಅಸ್ತಮಾ ಮೊದಲಾದ ಕಾಯಿಲೆಗಳಿಗೆ ಕಾರಣವಾಗುತ್ತದೆ. 
ವಾಯುಮಾಲಿನ್ಯ ಹೆಚ್ಚಾಗಿರುವ ನಗರಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಕೂಡ ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎನ್ನುತ್ತಾರೆ ಡಾ. ಬುಗ್ಗಿ. ಬೆಂಗಳೂರಿನಲ್ಲಿ ಸಹ ಇದನ್ನು ಕಾಣಬಹುದು. ಬೆಂಗಳೂರಿನಲ್ಲಿ ನಿರ್ಮಾಣ ಕಟ್ಟಡಗಳಿಂದ ಬರುವ ಧೂಳು, ವಾಹನಗಳಿಂದ ಬರುವ ಹೊಗೆ ಮಾಲಿನ್ಯ ದಟ್ಟಣೆಗೆ ಪ್ರಮುಖ ಕಾರಣವಾಗಿದೆ. ವಾಹನಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಡಾ.ಬುಗ್ಗಿ.
ಈ ಮಧ್ಯೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯ ಸಮಾಲೋಚಕ ಶ್ವಾಸಕೋಶಶಾಸ್ತ್ರಜ್ಞ ಡಾ.ಹೀರೆಣಪ್ಪ ಬಿ.ಉಂಡೂರು, ದೆಹಲಿಗೆ ಹೋಲಿಸಿದರೆ ಉಸಿರಾಟಕ್ಕೆ ಬೆಂಗಳೂರು ನಗರ ಸುರಕ್ಷಿತ ನಗರ. ಧೂಳು ಮತ್ತು ಹೊಗೆಯಿಂದ ಸಾಮಾನ್ಯವಾಗಿ ಉಸಿರಾಟದ ತೊಂದರೆ ಬರುತ್ತದೆ. ಇಂತಹ ಸಂದರ್ಭದಲ್ಲಿ ವಾಯು ಸ್ವಚ್ಛತೆ ಕ್ರಮಗಳು ಸ್ವಲ್ಪ ಸಹಾಯವಾಗಬಹುದು. ನಗರಗಳಲ್ಲಿ ಜನರು ಹೆಚ್ಚಾಗಿ ಹೊರಗೆ ಸಮಯಗಳನ್ನು ಕಳೆಯುತ್ತಾರೆ. ಹೀಗಾಗಿ ನಗರದ ಗಾಳಿಯ ಬಗ್ಗೆ ಹೆಚ್ಚು ಗಮನ ಹರಿಸುವುದು ಒಳಿತು ಎನ್ನುತ್ತಾರೆ ಡಾ. ಉಂಡೂರ್.
ಕಳಪೆ ರಸ್ತೆಗಳು ನಗರದ ಮಾಲಿನ್ಯ ಪ್ರಮಾಣವನ್ನು ಮತ್ತಷ್ಟು ಹದಗೆಡಿಸುತ್ತದೆ. 
ಇನ್ನೊಂದೆಡೆ ಪರಿಸರತಜ್ಞರು ಬೆಂಗಳೂರಿನ ವಾಯುಮಾಲಿನ್ಯ ಮಟ್ಟ ಇನ್ನು ನಾಲ್ಕೈದು ವರ್ಷಗಳಲ್ಲಿ ದೆಹಲಿಯಂತಾಗಬಹುದು ಎನ್ನುತ್ತಾರೆ. ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಮತ್ತು ನಗರದ ಸುತ್ತ ಹಸಿರು ಕಣ್ಮರೆಯಾಗುತ್ತಿರುವುದು ಇದಕ್ಕೆ ಕಾರಣವಾಗಿದೆ ಎನ್ನುತ್ತಾರೆ ಪರಿಸರವಾದಿ ದುರ್ಗೇಶ್ ಅಗ್ರಹರಿ, ಸರ್ಕಾರ ನಗರದ ಹೊರಭಾಗಗಳಲ್ಲಿ ಸ್ಯಾಟಲೈಟ್ ಟೌನ್ ಗಳನ್ನು ಸ್ಥಾಪಿಸಬೇಕು. ಅದನ್ನು ಐಟಿ ಕೇಂದ್ರವನ್ನಾಗಿಯೂ ಮಾಡಬಹುದು ಎನ್ನುತ್ತಾರೆ ಅಗ್ರಹರಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT