ಎಚ್ ಸಿ ಮಹದೇವಪ್ಪ 
ರಾಜ್ಯ

3 ವಾರಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿ ಕಾರ್ಯ ಪೂರ್ಣ: ಸಚಿವ ಮಹದೇವಪ್ಪ

ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯವನ್ನು ಮುಂದಿನ ಮೂರು ವಾರಗಳಲ್ಲಿ ಪೂರ್ಣಗೊಳಿಸಲಿದೆ ಎಂದು.....

ಬೆಳಗಾವಿ: ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯವನ್ನು ಮುಂದಿನ ಮೂರು ವಾರಗಳಲ್ಲಿ ಪೂರ್ಣಗೊಳಿಸಲಿದೆ ಎಂದು ಲೋಕೋಪಯೋಗಿ ಸಚಿವ ಎಚ್ ಸಿ ಮಹದೇವಪ್ಪ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಇಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ ಟಿ ಶ್ರೀಕಾಂತೇಗೌಡ ಅವರ ಪ್ರಶ್ನಿಗೆ ಉತ್ತರಿಸಿದ ಮಹದೇವಪ್ಪ ಅವರು, ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಹೆದ್ದಾರಿ ಹಾಳಾಗಿದೆ. ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಈಗಗಾಲೇ ಸೂಚನೆ ನೀಡಲಾಗಿದ್ದು, ಮುಂದಿನ ಮೂರು ವಾರಗಳಲ್ಲಿ ದುರಸ್ತಿ ಕಾರ್ಯ ಪೂರ್ಣಗೊಲಿಸಲಾಗುವುದು ಎಂದರು.
ಇದೇ ವೇಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೀಘ್ರದಲ್ಲೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥ ರಸ್ತೆಯನ್ನಾಗಿ ಪರಿವರ್ತಿಸುವ ಕಾರ್ಯ ಆರಂಭಿಸಲಿದೆ. ಜನವರಿಯಲ್ಲಿ ಯೋಜನೆಗೆ ಜಾಲನೆ ನೀಡುವುದಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರು ಭರವಸೆ ನೀಡಿದ್ದರೆ ಎಂದು ಮಹದೇವಪ್ಪ ಅವರು ತಿಳಿಸಿದರು.
ಇನ್ನು ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾರ್ಯವನ್ನು ಮುಂದಿನ ವರ್ಷ ಜನವರಿಯಲ್ಲಿ ಆರಂಭಿಸಿ ಏಪ್ರಿಲ್ ವೇಳೆಗೆ ಪೂರ್ಣಗೊಳಿಸುವುವುದಾಗಿ ಲೋಕೋಪಯೋಗಿ ಸಚಿವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT