ಗೌರಿ ಲಂಕೇಶ್ 
ರಾಜ್ಯ

ತಾಳ್ಮೆ ಕಳೆದುಕೊಂಡ ಗೌರಿ ಲಂಕೇಶ್ ಕುಟುಂಬ: ಹಂತಕರ ಹಿಡಿಯಲು ಎಸ್ಐಟಿಗೆ ಗಡುವು

ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡುತ್ತಿರುವ ಭರವಸೆ ಹಾಗೂ ಹೇಳಿಕಗಳಿಂದ ಬೇಸತ್ತಿರುವ ಗೌರಿಯವರ ಕುಟುಂಬಸ್ಥರು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಹಂತಕರನ್ನು ಹಿಡಿಯಲು...

ಬೆಂಗಳೂರು; ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡುತ್ತಿರುವ ಭರವಸೆ ಹಾಗೂ ಹೇಳಿಕಗಳಿಂದ ಬೇಸತ್ತಿರುವ ಗೌರಿಯವರ ಕುಟುಂಬಸ್ಥರು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಹಂತಕರನ್ನು ಹಿಡಿಯಲು ಗಡುವನ್ನು ನೀಡಿದೆ. 
ಡಿಸೆಂಬರ್ 5ರೊಳಗಾಗಿ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಹಂತಕರನ್ನು ಬಂಧನಕ್ಕೊಳಪಡಿಸದಿದ್ದರೆ, ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಕುಟುಂಬ ಗೌರಿಯವರ ಕುಟುಂಬಸ್ಥರು ಹೇಳಿದ್ದಾರೆ. 
ಪ್ರಕರಣದ ತನಿಖೆ ನಡೆಸುತ್ತಿರುವ ಆಯಾಮಗಳಿಂದ ನಮಗೆ ಬೇಸರವಾಗಿಲ್ಲ. ಆದರೆ, ತನಿಖೆಯಿಂದ ಯಾವುದೇ ರೀತಿಯ ಬೆಳವಣಿಗೆಗಳು ಕಂಡು ಬರುತ್ತಿಲ್ಲ ಎಂದು ಗೌರಿಯವರ ಸಹೋದರಿ ಕವಿತಾ ಅವರು ಹೇಳಿದ್ದಾರೆ. 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಗೌರಿಯವರನ್ನು ಹತ್ಯೆ ಮಾಡಿದ ಹಂತಕರನ್ನು ಹಿಡಿಯಲು ವಿಶೇಷ ತನಿಖಾ ದಳ ಎಲ್ಲಾ ರೀತಿಯ ಶ್ರಮ ಪಡುತ್ತಿದೆ ಎಂಬ ವಿಚಾರ ನಮಗೂ ತಿಳಿದಿದೆ. ಪ್ರಕರಣದ ತನಿಖೆ ಕುರಿತಂತೆ ಅಧಿಕಾರಿಗಳು ನಮ್ಮೊಂದಿಗೆ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ, ಹತ್ಯೆಯಾಗಿ 2 ತಿಂಗಳು ಕಳೆದಿದೆ. ಆದರೂ ಯಾವುದೇ ರೀತಿಯ ಫಲಿತಾಂಶಗಳು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು. ಗೌರಿಯವರ ಹಂತಕರು ಯಾರು ಎಂಬುದು ಈಗಾಗಲೇ ತಿಳಿದಿದೆ. ಇದೀಗ ಹಂತಕರ ವಿರುದ್ಧ ತನಿಖಾ ದಳದ ಅಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT