ಬೆಂಗಳೂರು: ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬೆಂಗಳೂರು ಅಬಕಾರಿ ಪೊಲೀಸರು ಬಂಧಿಸಿದ್ದಾರೆ ಮತ್ತು ಅವರುಗಳಿಂದ 250 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ
ಬಂಧಿತರನ್ನು ಪ್ರವೀಣ್ ನಾಯಕ, ಮುಕುಂದದತ್ತ ಖಂಡೇಕರ್, ನಾರಾಯಣ ಎಂದು ಗುರುತಿಸಲಾಗಿದ್ದು ಹಲವಾರು ವರ್ಷಗಳಿಂದ ಅವರುಗಳು ಈ ದಂಧೆಯಲ್ಲಿ ತೊಡಗಿಕೊಂಡಿದ್ದರೆಂದು ತಿಳಿದುಬಂದಿದೆ.
"ಅಂಕೋಲದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಸಂಸ್ಥೆಯೆ ಬಸ್ ನಲ್ಲಿ ಅಕ್ರಮ ಮದ್ಯ ಸಾಗಾಟ ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗಾಂಧಿನಗರದ ಸೀಬರ್ಡ್ ಟ್ರಾವೆಲ್ಸ್ ಕಚೇರಿಯ ಮುಂಭಾಗದಲ್ಲಿ ನಿಂತಿದ್ದ ಬಸ್ ನ್ನು ತಪಾಸಣೆ ನಡೆಸಿದಾಗ ಅಕ್ರಮ ಮದ್ಯ ದೊರಕಿದೆ" ಎಂದು ಬೆಂಗಳೂರು ನಗರ ಜಿಲ್ಲಾ ಅಬಕಾರಿ ಉಪ ಆಯುಕ್ತರು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos