ಸಾಂದರ್ಭಿಕ ಚಿತ್ರ 
ರಾಜ್ಯ

ಸಕಲೇಶಪುರ: ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್, ಓರ್ವ ಸಾವು ಇನ್ನೊಬ್ಬರಿಗೆ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ನ ಮಾರನಹಳ್ಳಿ ಎಂಬಲ್ಲಿ ಖಾಸಗಿ ಸಂಸ್ಥೆಗೆ ಸೇರಿದ ಬಸ್ ಒಂದು 25 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಸಕಲೇಶಪುರ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ನ ಮಾರನಹಳ್ಳಿ ಎಂಬಲ್ಲಿ ಖಾಸಗಿ ಸಂಸ್ಥೆಗೆ ಸೇರಿದ ಬಸ್ ಒಂದು 25 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ಉರುಳಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೊಬ್ಬರೈಗೆ ತೀವ್ರ ಗಾಯಗಳಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಪ್ರಗತಿ ಟ್ರಾವೆಲ್ಸ್‌ ಗೆ ಸೇರಿದ್ದ ಬಸ್ ಇಂದು ಬೆಳಗ್ಗೆ 4.30ರ ವೇಳೆಗೆ ಕಂದಕಕ್ಕೆ ಉರುಳಿದೆ. ಎದುರಿನಿಂದ ಬರುತ್ತಿದ್ದ ಕಾರ್ ಒಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಈ ಅವಘಡ ಸಂಬವಿಸಿದೆ.
ಘಟನೆಯಲ್ಲಿ ಮಂಜೇಶ್ವರ ಗ್ರಾಮ ನಿವಾಸಿ ಜಗದೀಶ್‌ ಪೂಜಾರಿ (50) ಎನ್ನುವವರು ಮೃತಪಟ್ಟಿದ್ದಾರೆ. ದಾವಣಗೆರೆಯ ಅರ್ಜುನ್‌ ಎನ್ನುವವರಿಗೆ ಗಂಭೀರ ಸ್ವರೂಪದ ಗಾಯಗಳಗಿದ್ದು ಅವರನ್ನು ಹಾಸನದ ಎನ್‌ಡಿಆರ್‌ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ.
30 ಜನ ಪ್ರಯಾಣಿಕರಿದ್ದ ಬಸ್ ಅವಘಡ ನಡೆದ ಬಳಿಕ ಬಸ್ ನ ತುರ್ತು ಬಾಗಿಲು ಮೂಲಕ ಪ್ರಯಾಣಿಕರನ್ನು ಹೊರಗೆ ಕರೆತರಲಾಯಿತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT