ಸಾಂದರ್ಭಿಕ ಚಿತ್ರ 
ರಾಜ್ಯ

ಸಕಲೇಶಪುರ: ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್, ಓರ್ವ ಸಾವು ಇನ್ನೊಬ್ಬರಿಗೆ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ನ ಮಾರನಹಳ್ಳಿ ಎಂಬಲ್ಲಿ ಖಾಸಗಿ ಸಂಸ್ಥೆಗೆ ಸೇರಿದ ಬಸ್ ಒಂದು 25 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಸಕಲೇಶಪುರ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ನ ಮಾರನಹಳ್ಳಿ ಎಂಬಲ್ಲಿ ಖಾಸಗಿ ಸಂಸ್ಥೆಗೆ ಸೇರಿದ ಬಸ್ ಒಂದು 25 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ಉರುಳಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೊಬ್ಬರೈಗೆ ತೀವ್ರ ಗಾಯಗಳಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಪ್ರಗತಿ ಟ್ರಾವೆಲ್ಸ್‌ ಗೆ ಸೇರಿದ್ದ ಬಸ್ ಇಂದು ಬೆಳಗ್ಗೆ 4.30ರ ವೇಳೆಗೆ ಕಂದಕಕ್ಕೆ ಉರುಳಿದೆ. ಎದುರಿನಿಂದ ಬರುತ್ತಿದ್ದ ಕಾರ್ ಒಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಈ ಅವಘಡ ಸಂಬವಿಸಿದೆ.
ಘಟನೆಯಲ್ಲಿ ಮಂಜೇಶ್ವರ ಗ್ರಾಮ ನಿವಾಸಿ ಜಗದೀಶ್‌ ಪೂಜಾರಿ (50) ಎನ್ನುವವರು ಮೃತಪಟ್ಟಿದ್ದಾರೆ. ದಾವಣಗೆರೆಯ ಅರ್ಜುನ್‌ ಎನ್ನುವವರಿಗೆ ಗಂಭೀರ ಸ್ವರೂಪದ ಗಾಯಗಳಗಿದ್ದು ಅವರನ್ನು ಹಾಸನದ ಎನ್‌ಡಿಆರ್‌ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ.
30 ಜನ ಪ್ರಯಾಣಿಕರಿದ್ದ ಬಸ್ ಅವಘಡ ನಡೆದ ಬಳಿಕ ಬಸ್ ನ ತುರ್ತು ಬಾಗಿಲು ಮೂಲಕ ಪ್ರಯಾಣಿಕರನ್ನು ಹೊರಗೆ ಕರೆತರಲಾಯಿತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT