ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ 
ರಾಜ್ಯ

ಸ್ಲೀಪರ್ ಬಸ್ ಗಳಲ್ಲಿ ಪರದೆ ತೆಗೆದು ಸಿಸಿಟಿವಿ ಅಳವಡಿಸಿ: ಜಯಮಾಲ ಮನವಿ ತಿರಸ್ಕರಿಸಿದ ಸಚಿವ

ಸರ್ಕಾರಿ ಮತ್ತು ಖಾಸಗಿ ಬಸ್ ಗಳ ಸ್ಲೀಪರ್ ಕೋಚ್ ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಬಸ್ ಗಳಲ್ಲಿ ಪರದೆಗಳನ್ನು ತೆಗೆದು ಸಿಸಿಟಿವಿಗಳನ್ನು ಅಳವಡಿಸುವಂತೆ ವಿಧಾನ ಪರಿಷತ್ ಸದಸ್ಯೆ ಜಯಮಾಲ ಅವರು ಮಾಡಿದ ಮನವಿಯನ್ನು ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ...

ಬೆಳಗಾವಿ: ಸರ್ಕಾರಿ ಮತ್ತು ಖಾಸಗಿ ಬಸ್ ಗಳ ಸ್ಲೀಪರ್ ಕೋಚ್ ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಬಸ್ ಗಳಲ್ಲಿ ಪರದೆಗಳನ್ನು ತೆಗೆದು ಸಿಸಿಟಿವಿಗಳನ್ನು ಅಳವಡಿಸುವಂತೆ ವಿಧಾನ ಪರಿಷತ್ ಸದಸ್ಯೆ ಜಯಮಾಲ ಅವರು ಮಾಡಿದ ಮನವಿಯನ್ನು ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು ಶುಕ್ರವಾರ ತಿರಸ್ಕರಿಸಿದ್ದಾರೆ. 
ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯೆ ಜಯಮಾಲ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಸ್ಲೀಪರ್ ಬಸ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಹೇಳಿದರು. 
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು, ಅನೈತಿಕ ಚಟುವಟಿಗಳು ನಡೆದಿರುವ ಪ್ರಕರಣಗಳ ವರದಿಯಾಗಿಲ್ಲ. ಒಂದು ವೇಳೆ ಪ್ರಕರಣಗಳು ನಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. 
ತಕ್ಷಣ ಜಯಮಾಲ ಅವರು, ಸರ್ಕಾರಕ್ಕೆ ಈ ಬಗ್ಗೆ ವರದಿ ನೀಡಲಾಗಿದೆ. ಸಚಿವರು ಅದನ್ನು ಓದಬೇಕು ಎಂದು ತಿಳಿಸಿದರು. ಜಯಮಾಲ ಅವರಿಗೆ ಮೋಟಮ್ಮ ಅವರೂ ಕೂಡ ಬೆಂಬಲ ಸೂಚಿಸಿ ತಮ್ಮ ಪಕ್ಷದ ನಾಯಕರ ಮೇಲೆಯೇ ವಾಗ್ದಾಳಿ ನಡೆಸಿದರು. 
ನಂತರ ಉತ್ತರಿಸಿದ ಸಚಿವರು, ಮಹಿಳೆಯರ ಸುರಕ್ಷತೆ ಹಿತದೃಷ್ಟಿಯಿಂದ ಪರದೆಯನ್ನು ಹಾಕಲಾಗಿದೆ. ಮಹಿಳೆಯರಿಗೆ ಸಿಂಗಲ್ ಸೀಟ್ ನೀಡಲು ಆದ್ಯತೆ ನೀಡಲಾಗುತ್ತದೆ. ಒಂದು ವೇಳೆ ಡಬ್ಬಲ್ ಸೀಟ್ ಕಾಯ್ದಿರಿಸಿದರೆ, ಮತ್ತೊಂದು ಸೀಟು ಪುರುಷರು ಕಾಯ್ದಿರಿಸದಂತೆ ಬ್ಲಾಕ್ ಮಾಡಲಾಗುತ್ತದೆ. ಕೆಲವೊಮ್ಮೆ ದಂಪತಿಗಳಿರುವುದರಿಂದ ಹಾಗೂ ಮಹಿಳೆ ರಕ್ಷಣೆಗಾಗಿ ಪರದೆ ಅಗತ್ಯವಿದೆ. ಪರದೆಗಳನ್ನು ತಗೆದು ಹಾಕಿದಲ್ಲಿ ಸಾರ್ವಜನಿಕ ಪ್ರಯಾಣಿಕರ ಖಾಸಗಿತನಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ಪರದೆ ತೆಗೆದು ಸಿಸಿಟಿವಿ ಅಳವಡಿಸುವುದು ಸೂಕ್ತವಲ್ಲ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT