ಮಂಗಳೂರು-ಬೆಂಗಳುರು ರೈಲು 
ರಾಜ್ಯ

ಮಂಗಳೂರು-ಬೆಂಗಳೂರು ರೈಲು: ಫೆ.10ರಿಂದ ಶ್ರವಣಬೆಳಗೊಳ ಮಾರ್ಗದಲ್ಲಿ ಸಂಚಾರ

ಕರಾವಳಿ ಜನತೆಯ ನ್ನು ರಾಜಧಾನಿ ಬೆಂಗಳೂರಿಗೆ ತಲುಪಿಸುವ ಮುಖ್ಯ ರೈಲು ಮಾರ್ಗ,ಬೆಂಗಳೂರು-ಕಣ್ಣೂರು ಹಾಗೂ ಬೆಂಗಳೂರು-ಕಾರವಾರ ರೈಲಿನ ಮಾರ್ಗ ಬದಲಾವಣೆಯಾಗಿದೆ.

ಬೆಂಗಳೂರು: ಕರಾವಳಿ ಜನತೆಯ ನ್ನು ರಾಜಧಾನಿ ಬೆಂಗಳೂರಿಗೆ ತಲುಪಿಸುವ ಮುಖ್ಯ ರೈಲು ಮಾರ್ಗ,ಬೆಂಗಳೂರು-ಕಣ್ಣೂರು ಹಾಗೂ ಬೆಂಗಳೂರು-ಕಾರವಾರ ರೈಲಿನ ಮಾರ್ಗ ಬದಲಾವಣೆಯಾಗಿದೆ. ವಾರದಲ್ಲಿ 4 ದಿನ ಯಶವಂತಪುರ–ಶ್ರವಣಬೆಳಗೊಳ ಮಾರ್ಗ ಹಾಗೂ 3 ದಿನ ಮೈಸೂರು ಮಾರ್ಗದಲ್ಲಿ ರೈಲು ಸಂಚಾರ ನಡೆಸಲಿದೆ. ಮುಂದಿನ ವರ್ಷದ ಫೆ.10ರಿಂದ ಈ ನೂತನ ಮಾರ್ಗಸೂಚಿ ಜಾರಿಗೆ ಬರಲಿದೆ.
ಇದಾಗಳೇ ಸಿದ್ದಗೊಂಡಿರುವ ಯಶವಂತಪುರ–ಶ್ರವಣಬೆಳಗೊಳ ಮಾರ್ಗದಿಂದಾಗಿ ರಾಜಧಾನಿಯಿಂದ ಮಂಗಳೂರಿಗೆ ತಲುಪುವ ಒಟ್ಟು ಸಂಚಾರ ಅವಧಿ 3 ಗಂಟೆಗಳಷ್ಟು ತಗ್ಗಲಿದೆ.
ಬೆಂಗಳೂರಿನಿಂದ ಹೊರಡುವ ರೈಲು ಯಶವಂತಪುರ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ ನಿಲ್ದಾಣದಲ್ಲಿ ನಿಂತು ಮಂಗಳೂರು ತಲುಪಲಿದ್ದು, ಅಲ್ಲಿಂದ ಮುಂದೆ ಕಾರವಾರ ಹಾಗೂ ಕಣ್ಣುರಿನತ್ತ ಸಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು-ಮಂಗಳೂರು ರೈಲಿನ ನೂತನ ವೇಳಾಪಟ್ಟಿ ಹೀಗಿದೆ- ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ಸಂಜೆ 7.15ಕ್ಕೆ ಹೊರಟು ಮರುದಿನ ಬೆಳಗ್ಗೆ 6.20ಕ್ಕೆ ಮಂಗಳೂರು ಸೇರಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ಹರಿಯಾಣ ಬಳಿಕ ಇದೀಗ ಉತ್ತರಾಖಂಡದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ! ಶಾಲೆ ಬಳಿ ನೂರಾರು ಜಿಲೆಟಿನ್ ಕಡ್ಡಿಗಳು!

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

SCROLL FOR NEXT