ಬಿಎಂಟಿಸಿ ಬಸ್ಸಿನ ಸಾಂದರ್ಭಿಕ ಚಿತ್ರ 
ರಾಜ್ಯ

ಮಹಿಳೆಗೆ ದಂಡ ಹಾಕಿದ ಬಿಎಂಟಿಸಿಗೆ 100 ಪಟ್ಟು ಹೆಚ್ಚು ಪರಿಹಾರ ನೀಡಲು ಹೇಳಿದ ನ್ಯಾಯಾಲಯ!

ಅವರ ಕಡೆಯಿಂದ ಯಾವುದೇ ತಪ್ಪಿಲ್ಲದಿದ್ದರೂ ಕೂಡ ವೃದ್ಧೆಯೊಬ್ಬರಿಗೆ ದಂಡ ಹಾಕಿದ್ದಕ್ಕೆ ಅದರ 100 ಪಟ್ಟು ...

ಬೆಂಗಳೂರು: ಅವರ ಕಡೆಯಿಂದ ಯಾವುದೇ ತಪ್ಪಿಲ್ಲದಿದ್ದರೂ ಕೂಡ ವೃದ್ಧೆಯೊಬ್ಬರಿಗೆ ದಂಡ ಹಾಕಿದ್ದಕ್ಕೆ ಅದರ 100 ಪಟ್ಟು ಹೆಚ್ಚು ದಂಡವನ್ನು ತೆರಬೇಕಾದ ಪರಿಸ್ಥಿತಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಉಂಟಾಗಿದೆ. ಬೆಂಗಳೂರು ದಕ್ಷಿಣದ ಸೋಮನಹಳ್ಳಿ ನಿವಾಸಿಯಾಗಿರುವ ವೆಂಕಟೇಶ್ ಮೂರ್ತಿಯವರ ಪತ್ನಿ 61 ವರ್ಷದ ಮಂಜುಳಾ ಎಂಬುವವರು ಮೂರು ವರ್ಷಗಳ ನಂತರ ಪರಿಹಾರ ಮೊತ್ತವನ್ನು ಪಡೆದಿದ್ದಾರೆ.
ನಗರದಲ್ಲಿನ ಗ್ರಾಹಕರ ನ್ಯಾಯಾಲಯ ಬಿಎಂಟಿಸಿಗೆ ಮಂಜುಳಾ ಅವರಿಗೆ 20,000 ರೂಪಾಯಿ ದಂಡದ ಮೊತ್ತ ನೀಡಲು ಆದೇಶಿಸಿತು. ಬಿಎಂಟಿಸಿ ಅಧಿಕಾರಿಗಳ ವರ್ತನೆ ಮಂಜುಳಾ ಅವರಿಗೆ ಅವರಿಗೆ ಬೇರೆ ಪ್ರಯಾಣಿಕರ ಎದುರು ಅವಮಾನವುಂಟುಮಾಡಿದ್ದಲ್ಲದೆ ಮಾನಸಿಕವಾಗಿಯೂ ಹಿಂಸೆಯಾಗಿದೆ ಎಂದು ಹೇಳಿದೆ.
ನಡೆದ ಘಟನೆ:2013ರ ಡಿಸೆಂಬರ್ 28ರಂದು ಬೆಳಗ್ಗೆ 5 ಗಂಟೆಗೆ ಕೆ.ಆರ್.ಮಾರ್ಕೆಟ್ ಮೂಲಕ ಸರ್ಜಾಪುರ ರಸ್ತೆಯಾಗಿ ಸೋಮನಹಳ್ಳಿಯಿಂದ ಚಿಕ್ಕ ತಿರುಪತಿಗೆ ಬಸ್ಸು ಹೋಗುತ್ತಿತ್ತು. ಅಂದು ಶನಿವಾರವಾದರೂ ಕೂಡ ನಿರ್ವಾಹಕ ಚೆನ್ನೇ ಗೌಡ ಶುಕ್ರವಾರದ ದಿನದ ಪಾಸು ಮಂಜುಳಾಗೆ ನೀಡಿದರು. ಅದನ್ನು ಮಂಜುಳಾ ಪ್ರಶ್ನಿಸಿದಾಗ ತಮಗೆ ಶುಕ್ರವಾರದ ಪಾಸು ನೀಡಲು ಅವಕಾಶ ನೀಡಿದ್ದು ಅದಕ್ಕೆ ಡಿಸೆಂಬರ್ 28ಎಂದು ಟಿಕ್ ಮಾಡಿ ಕೊಟ್ಟರು. ಯಾರೂ ನಿಮ್ಮನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಹೇಳಿ ನಿರ್ವಾಹಕ ಟಿಕೆಟ್ ಕೊಟ್ಟರು.
ಸರ್ಜಾಪುರಕ್ಕೆ ಮುಟ್ಟುವ ಮೊದಲು ಬಸ್ ನಿಲ್ದಾಣಕ್ಕೆ ತಲುಪುವ ಮುನ್ನ ಬಿಎಂಟಿಸಿ ಅಧಿಕಾರಿಗಳು ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರ ಟಿಕೆಟ್ ಪರೀಕ್ಷಿಸಲು ಆರಂಭಿಸಿದರು. ಮಂಜುಳಾ ಪಾಸ್ ತೋರಿಸಿದಾಗ ಅಧಿಕಾರಿಗಳು ಅದನ್ನು ಸ್ವೀಕರಿಸಲು ನಿರಾಕರಿಸಿದರು. ಆಕೆ ನಡೆದ ಸಂಗತಿಯನ್ನು ವಿವರಿಸಲು ಹೊರಟಾಗ ಅವರು ಕೇಳಿಸಿಕೊಳ್ಳಲು ಸಿದ್ದರಿರಲಿಲ್ಲ. 400 ರೂಪಾಯಿ ದಂಡ ಕಟ್ಟಲು ಹೇಳಿ ಬಸ್ಸಿನಿಂದ ಹೊರದಬ್ಬಿದರು. 400 ರೂಪಾಯಿ ದಂಡ ಕಟ್ಟಿದರೂ ಕೂಡ 220 ರೂಪಾಯಿಗೆ ರಶೀದಿ ನೀಡಿದ್ದರು.
ಮಂಜುಳಾ ಸುಮ್ಮನೆ ಕೂರಲಿಲ್ಲ. ಬಿಎಂಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿದರೆ, ಆದರೆ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗಲಿಲ್ಲ. ಮಂಜುಳಾ ಕಡೆಯಿಂದ ಬಂದ ಲೀಗಲ್ ನೊಟೀಸನ್ನು ನಿರಾಕರಿಸಿದರು. ಇದಕ್ಕೆ ಮಂಜುಳಾ ಹಠ ಸಾಧಿಸಿ ಗ್ರಾಹಕರ ನ್ಯಾಯಾಲಯಕ್ಕೆ 2014ರಲ್ಲಿ ದೂರು ನೀಡಿದರು. 
ಮೂರು ವರ್ಷಗಳ ವಾದದ ನಂತರ 10,000 ರೂಪಾಯಿ ಪರಿಹಾರ ಮತ್ತು 10,000 ರೂಪಾಯಿ ಕಾನೂನು ವ್ಯಾಜ್ಯ ವೆಚ್ಚ ನೀಡಬೇಕೆಂದು ಆದೇಶಿಸಿದೆ. ಆದೇಶ ಬಂದ 30 ದಿನಗಳೊಳಗೆ ಮಂಜುಳಾಗೆ ಈ 20,000 ರೂಪಾಯಿ ನೀಡಬೇಕೆಂದು ಆದೇಶಿಸಿದೆ. ಇದಕ್ಕೆ ಕಾರಣಕರ್ತರು ನಿರ್ವಾಹಕ ಚೆನ್ನೆ ಗೌಡ, ಬನಶಂಕರಿ ವಿಭಾಗದ ಡಿಪೊ ಮ್ಯಾನೇಜರ್ ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT